ನೇಜಾರು ಹತ್ಯೆ ಪ್ರಕರಣ : ಮಾ.7ರಂದು ಅಂತಿಮ ಆದೇಶ – vishwanews24

Featured, ಉಡುಪಿ

ನೇಜಾರು ಹತ್ಯೆ ಪ್ರಕರಣ : ಮಾ.7ರಂದು ಅಂತಿಮ ಆದೇಶ

ಉಡುಪಿ : ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿ ಹಾಗೂ ಆರೋಪಿಯ ಕಾರನ್ನು ವಶಕ್ಕೆ ನೀಡಬೇಕೆಂಬ ಬ್ಯಾಂಕಿನವರ ಅರ್ಜಿಯ ಕುರಿತ ಅಂತಿಮ ಆದೇಶವನ್ನು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಾ.7ಕ್ಕೆ ಕಾಯ್ದಿರಿಸಿದೆ.

ಫೆ.20ರಂದು ವಿಚಾರಣೆ ಹಿನ್ನೆಲೆಯಲ್ಲಿ ಬೆಂಗಳೂರು ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿ ಪ್ರವೀಣ್ ಚೌಗುಲೆ ಕೃತ್ಯಕ್ಕೆ ಬಳಸಿದ ಕಾರನ್ನು ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡುವ ಕುರಿತು ಬ್ಯಾಂಕ್ ಪರ ವಕೀಲರು ವಾದ ಮಂಡಿಸಿದರು. ಆರೋಪಿ ಪರ ವಕೀಲರು, ಕಾರನ್ನು ಬ್ಯಾಂಕಿನವರ ವಶಕ್ಕೆ ನೀಡಲು ನಮ್ಮ ಆಕ್ಷೇಪ ಇಲ್ಲ ಎಂದು ತಿಳಿಸಿದರು.

ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ  ಪತ್ತೆ – vishwanews24

ಆದರೆ ವಿಶೇಷ ಸರಕಾರಿ ಅಭಿಯೋಜಕರು, ಕಾರನ್ನು ಬ್ಯಾಂಕಿನವರಿಗೆ ನೀಡಿದರೆ, ಮುಂದೆ ಅವರು ಅದನ್ನು ಮಾರಾಟ ಮಾಡಿದರೆ ಸಾಕ್ಷ್ಯ ವಿಚಾರಣೆಗೆ ತೊಂದರೆ ಆಗುತ್ತದೆ ಎಂಬುದಾಗಿ ಆಕ್ಷೇಪಣೆ ಸಲ್ಲಿಸಿದರು. ಈ ವಾದ ಪ್ರತಿವಾದ ವನ್ನು ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ, ಈ ಅರ್ಜಿಯ ಕುರಿತ ಅಂತಿಮ ಆದೇಶವನ್ನು ಮಾ.7ಕ್ಕೆ ಕಾಯ್ದಿರಿಸಿ ಆದೇಶ ನೀಡಿದರು.

ಇದೇ ದಿನ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದ ಅಂತಿಮ ಆದೇಶವನ್ನು ಕೂಡ ನ್ಯಾಯಾಧೀಶರು ನೀಡ ಲಿದ್ದಾರೆ. ಈ ಅರ್ಜಿಗೂ ವಿಶೇಷ ಸರಕಾರಿ ಅಭಿಯೋಜಕರು, ಆಕ್ಷೇಪ ಸಲ್ಲಿಸಿದ್ದರು.

ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ  ಪತ್ತೆ – vishwanews24

Leave a Reply