ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ : ಸಚಿವ ಕೋಟ ಸ್ಪಷ್ಟನೆ – VIshwnaews24

Featured, ರಾಜ್ಯ ನ್ಯೂಸ್

ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ..

ನಾರಾಯಣ ಗುರುಗಳ ಅನುಯಾಯಿಗಳು ಅಪಪ್ರಚಾರಕ್ಕೆ ಕಿವಿಗೊಡಬಾರದು..

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಬಂದ ನಂತರ ಸ್ಪಷ್ಟನೆ ನೀಡಿದ ಸಚಿವ ಕೋಟ, ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವರಾದ ಶ್ರೀ ನಾಗೇಶ್ ಅವರನ್ನು ಈ ಕುರಿತು ಬೇಟಿಯಾಗಿ ನಾನು ಮಾತನಾಡಿದ್ದು, ಪಠ್ಯಪುಸ್ತಕದಲ್ಲಿ ನಾರಾಯಣಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಾದ್ಯಂತ ಇರುವ ಈಡಿಗ, ಬಿಲ್ಲವ ಸಮುದಾಯ ಸೇರಿದಂತೆ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ವಿನಂತಿಸಿದ ಸಚಿವ ಕೋಟ, ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕಾಪು : ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ – Vishwanews24

 

 

Leave a Reply