ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ
ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ) ಸ್ಪಷ್ಟನೆ ನೀಡಿದೆ. ಪುಸ್ತಕದ ಹೆಸರಿಗೂ ಧರ್ಮಕ್ಕೂ ಯಾವುದೇ ಸಂಬಂಧ ಇಲ್ಲ. ‘ಕೃಷ್ಣ’ ಎಂಬುದು ಕೃಷ್ಣಾ ನದಿಯ ಹೆಸರಾಗಿದೆ ಎಂದು ತಳಿಸಿದೆ.
ಇತ್ತೀಚೆಗೆ ಬಿಡುಗಡೆಯಾದ 6ನೇ ತರಗತಿಯ ಕನ್ನಡ (ಆರ್-3) ಪಠ್ಯಪುಸ್ತಕಕ್ಕೆ(Text Book) ‘ಕೃಷ್ಣ’ (Krishna)ಎಂದು ಹೆಸರು ಇಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಜೊತೆಗೆ, ಪಠ್ಯಪುಸ್ತಕದಲ್ಲಿ ಸಸ್ಯಾಹಾರವನ್ನು ಮಾತ್ರ ಪ್ರೋತ್ಸಾಹಿಸಲಾಗಿದೆ ಮತ್ತು ಮಾಂಸಾಹಾರವನ್ನು ಕಡೆಗಣಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿತ್ತು. ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಎನ್ಸಿಇಆರ್ಟಿ, ಎಲ್ಲ ಆರ್-3 ಭಾಷಾ ಪಠ್ಯಪುಸ್ತಕಗಳಿಗೆ ಭಾರತದ ನದಿಗಳ ಹೆಸರನ್ನೇ ಇಡಲಾಗಿದೆ ಎಂದು ತಿಳಿಸಿದೆ.
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24
ಹಿಂದಿ ಪಠ್ಯಪುಸ್ತಕಕ್ಕೆ ‘ಗಂಗಾ’, ಇಂಗ್ಲಿಷ್ ಪಠ್ಯಪುಸ್ತಕಕ್ಕೆ ‘ಕಾವೇರಿ’ ಹಾಗೂ ಉರ್ದು ಪಠ್ಯಪುಸ್ತಕಕ್ಕೆ ‘ಜಮುನಾ’ ಎಂದು ಹೆಸರು ಇಡಲಾಗಿದೆ. ಅದೇ ಮಾದರಿಯಲ್ಲಿ ಕನ್ನಡ ಪಠ್ಯಪುಸ್ತಕಕ್ಕೆ ‘ಕೃಷ್ಣ’ ಎಂದು ಹೆಸರಿಡಲಾಗಿದೆ ಎಂದು ಸ್ಪಷ್ಟಪಡಿಸಿದೆ.
ಕೃಷ್ಣಾ ನದಿ ಕರ್ನಾಟಕದ ಸಂಸ್ಕೃತಿ, ಭೌಗೋಳಿಕತೆ ಹಾಗೂ ಜನಜೀವನದೊಂದಿಗೆ ನಿಕಟ ಸಂಬಂಧ ಹೊಂದಿರುವ ಕಾರಣ ಈ ಹೆಸರನ್ನು ಆಯ್ಕೆ ಮಾಡಲಾಗಿದೆ ಎಂದು ಎನ್ಸಿಇಆರ್ಟಿ ತಿಳಿಸಿದೆ.
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24
