ಪಡುಬಿದ್ರಿ : ನಡಿಪಟ್ನದಲ್ಲಿ ಕಡಲ್ಕೊರೆತ ; ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ಪರಿಶೀಲನೆ – vishwanews24
ಪಡುಬಿದ್ರಿ : ನಡಿಪಟ್ನದಲ್ಲಿ ಕಡಲ್ಕೊರೆತ ; ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ಪರಿಶೀಲನೆ
ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ನ ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆಲ ದಿನಗಳಿಂದ ಸುರಿಯುತ್ತಿರುವ ಅತಿಯಾದ ಗಾಳಿ ಮಳೆಯಿಂದಾಗಿ ವಿಪರೀತ ಕಡಲ್ಕೊರೆತ ಉಂಟಾಗುತ್ತಿದ್ದು ತಕ್ಷಣಕ್ಕೆ ತಾತ್ಕಾಲಿಕ ಪರಿಹಾರ ಕಾಮಗಾರಿ ಕೈಗೊಳ್ಳಲು ಬಂದರು ಮತ್ತು ಮೀನುಗಾರಿಕಾ ಇಲಾಖಾಧಿಕಾರಿಗಳಿಗೆ ಸೂಚಿಸಿ ಕಡಲ್ಕೊರೆತದ ಶಾಶ್ವತ ಪರಿಹಾರಕ್ಕೆ ಅನುದಾನ ಮಂಜೂರು ಮಾಡುವಂತೆ ಮೀನುಗಾರಿಕಾ ಸಚಿವರ ಬಳಿ ಮಾತನಾಡುವುದಾಗಿ ತಿಳಿಸಿದರು.
ಕುತ್ಯಾರು: ಕಾಲುಸಂಕ ಇಲ್ಲದೆ ಗ್ರಾಮಸ್ಥರ ಹಾಗೂ ಮಕ್ಕಳ ಪರದಾಟ – vishwanews24
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಹೇಮಚಂದ್ರ, ಸದಸ್ಯರಾದ ವಿದ್ಯಾ ಶ್ರೀ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ ಹಾಗೂ ಕಾಪು ತಹಶೀಲ್ದಾರರಾದ ಪ್ರತೀಭಾ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶೋಭಾ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
