ಪಡುಬಿದ್ರಿ : ಬೋನಿಗೆ ಬಿದ್ದ ಚಿರತೆ : ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ -Vishwanews24

Featured, ಉಡುಪಿ

ಪಡುಬಿದ್ರಿ : ಬೋನಿಗೆ ಬಿದ್ದ ಚಿರತೆ : ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ -Vishwanews24

ಪಡುಬಿದ್ರಿ: ಜನವಸತಿ ಪರಿಸರದಲ್ಲಿ ಓಡಾಡುತ್ತಿದ್ದ ಚಿರತೆಯೊಂದು ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಘಟನೆ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಸಾಂತೂರಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಸಾಂತೂರಿನ ರವಿ ಶೆಟ್ಟಿ ಅವರ ಮನೆಯ ತೋಟದಲ್ಲಿ ಹೆಣ್ಣು ಚಿರತೆಯನ್ನು ಸೆರೆ ಹಿಡಿಯಲಾಗಿದೆ.

ಈ ಚಿರತೆಯು ರವಿ ಶೆಟ್ಟಿಯವರ ಮನೆಯ ಸುತ್ತಮುತ್ತ ಓಡಾಟ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸರಿಯಾಗಿತ್ತು. ಈ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ಇಲ್ಲಿ ಬೋನು ಇಟ್ಟಿದ್ದರು. ಗುರುವಾರ ತಡರಾತ್ರಿ ಹೆಣ್ಣು ಚಿರತೆಯು ಬೋನಿಗೆ ಬಿದ್ದಿದ್ದು ಇಂದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ

ವಲಯ ಅರಣ್ಯಾಧಿಕಾರಿ ಕ್ಲಿಪರ್ಟ್ ಲೋಬೋ, ಅರಣ್ಯ ಅಧಿಕಾರಿಗಳಾದ ಜೀವನದಾಸ್ ಶೆಟ್ಟಿ, ಗುರುರಾಜ್, ಅಭಿಲಾಶ್, ಜಯರಾಮ ಶೆಟ್ಟಿ, ಮಂಜುನಾಥ್ ನಾಯಕ್, ಪರಶುರಾಮ ಉಪಸ್ಥಿತರಿದ್ದರು.

ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ವ್ಯವಸ್ಥೆಯನ್ನು ಅರಣ್ಯಾಧಿಕಾರಿಗಳು ನಡೆಸಿದ್ದಾರೆ.