ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ – Vishwanews24
ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ
ಬೆಳಗಾವಿ: ವಿಧಾನ ಪರಿಷತ್ ಸಭಾಪತಿಯಾಗಿ ಬಿಜೆಪಿ ಅಭ್ಯರ್ಥಿ ಹಾಗೂ ಹಿರಿಯ ರಾಜಕಾರಣಿ ಬಸವರಾಜ್ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾದರು.
ಬಸವರಾಜ್ ಹೊರಟ್ಟಿ ಒಬ್ಬರೇ ನಾಮಪತ್ರ ಸಲ್ಲಿಕೆ ಮಾಡಿರುವ ಹಿನ್ನಲೆ ಬುಧವಾರ ಪರಿಷತ್ ನಲ್ಲಿ ಬಸವರಾಜ್ ಹೊರಟ್ಟಿ ಅವರ ಹೆಸರನ್ನು ಪರಿಷತ್ ಸದಸ್ಯರು ಪ್ರಸ್ತಾಪಿಸಿದರು.
ಬಳಿಕ ಅನುಮೋದನೆಯ ಮೂಲಕ ಘೋಷಣೆ ಮಾಡಲಾಯಿತು.
ಆಯ್ಕೆ ಪ್ರಕ್ರಿಯೆ ಬಳಿಕ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕರು ಸಭಾಪತಿ ಪೀಠಕ್ಕೆ ಹೊರಟ್ಟಿ ಅವರನ್ನು ಕರೆತಂದರು.
ಜೆಡಿಎಸ್ ತೊರೆದು ಬಿಜೆಪಿ ಸೇರಿದ ಹೊರಟ್ಟಿ : ಬಸವರಾಜ್ ಹೊರಟ್ಟಿ ಅವರು ಮೇ ತಿಂಗಳಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. 1980ರಿಂದ ಒಂಭತ್ತು ಬಾರಿ ಪರಿಷತ್ತು ಸದಸ್ಯರಾಗಿರುವ ಅವರು ಮೊದಲ ಚುನಾವಣೆಯನ್ನು ಹೊರತುಪಡಿಸಿ, ಅವರು ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದೆ ಹೆಚ್ಚು. ಇದೀಗ ಎರಡನೇ ಬಾರಿಗೆ ಸಭಾಪತಿ ಸ್ಥಾನವನ್ನು ಅಲಂಕರಿಸಿದ್ದಾರೆ.
