ಪರೇಶ್ ಮೆಸ್ತಾ ಪ್ರಕರಣ : ಸಿಬಿಐ ಪುನರ್ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ – Vishwanews24

Featured, ರಾಜ್ಯ ನ್ಯೂಸ್

ಪರೇಶ್ ಮೆಸ್ತಾ ಪ್ರಕರಣ : ಸಿಬಿಐ ಪುನರ್ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ

ಮನವಿಯನ್ನು ಪರಿಶೀಲಿಸಿ, ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ 

ಬೆಂಗಳೂರು: ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐ ಪುನರ್ ತನಿಖೆ ನಡೆಸುವಂತೆ ಆತನ ತಂದೆ ಕಮಲಾಕರ್ ಮೇಸ್ತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಉತ್ತರ ಕನ್ನಡ ಜಿಲ್ಲೆ ಕುಮಟಾ ಭಾಗದಲ್ಲಿ ನಡೆದಿರುವ ಪರೇಶ್ ಮೆಸ್ತಾ ಸಾವಿನ ಪ್ರಕರಣ ಇದೀಗ ವಿಧಾನಸೌಧದ ಮೆಟ್ಟಿಲೇರಿದ್ದು, ಪರೇಶ್ ಮೆಸ್ತಾನ ತಂದೆ ಕಮಾಲಾಕರ್ ಮೆಸ್ತಾ ಅವರು ಗುರುವಾರ ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿರವರಿಗೆ ಮನವಿ ಸಲ್ಲಿಸಿ, ನನ್ನ ಮಗ ಪರೇಶ್ ಮೆಸ್ತಾನ ಸಾವು ಅಸಹಜ ಸಾವಾಗಿದ್ದು, ಸಿಬಿಐ ಸಾಕ್ಷಾಧಾರಗಳು ಲಭ್ಯ ಆಗಿಲ್ಲ ಎಂಬ ಕಾರಣಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಇದರಿಂದ ನನಗೆ ನ್ಯಾಯ ವಂಚನೆ ಆಗಿದೆ. ನನ್ನ ಮಗ ಪರೇಶ್ ಮೆಸ್ತಾನ ಪ್ರಕರಣವನ್ನು ಸಿಬಿಐಗೆ ನೀಡುವಾಗ 4 ತಿಂಗಳ ಅವಧಿ ಮೀರಿದ್ದು, ಬಹುತೇಕ ಸಾಕ್ಷಾಧಾರಗಳು ನಾಶ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮತ್ತಷ್ಟು ಆಳವಾದ ತನಿಖೆ ಮಾಡಬೇಕಾದ ಅವಶ್ಯಕತೆ ಇರುವುದರಿಂದ ಪುನರಪಿ ಸಿಬಿಐ ತನಿಖೆಗೆ ಆದೇಶ ನೀಡಬೇಕೆಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.

ಕುತ್ಯಾರು : ವಿವಿಧ ಕಾಮಗಾರಿಗಳಿಗೆ 3 ಕೋಟಿ 27 ಲಕ್ಷ ರೂ. ಅನುದಾನ.. ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದ ಶಾಸಕ ಲಾಲಾಜಿ ಆರ್ ಮೆಂಡನ್ – Vishwanews24

ಕಮಾಲಕರ್ ಮೆಸ್ತಾ ಅವರ ಮನವಿಯನ್ನು ಆಲಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿರವರು ತಂದೆಯಾಗಿ ನಿಮ್ಮ ಕಷ್ಟ ಸರ್ಕಾರ ಅರ್ಥಮಾಡಿಕೊಳ್ಳುತ್ತದೆ. ಮನವಿಯನ್ನು ಪರಿಶೀಲಿಸಿ, ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು, ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್, ಮೀನುಗಾರಿಗಾ ಸಚಿವರಾದ ಎಸ್.ಅಂಗಾರ, ಶಾಸಕರಾದ ದಿನಕರ್ ಶೆಟ್ಟಿ ಸುನಿಲ್ ನಾಯಕ್ ಹಾಗೂ ಕುಮಾರ ನಾರಾಯಣ ಮಾರ್ಕಾಂಡೇ ಅವರು ಜೊತೆಯಲ್ಲಿ ಇದ್ದರು.

ಬಂಟ್ವಾಳ: ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಕರು ಮೃತ್ಯು ; ಮನೆಗೆ ತೀವ್ರ ಹಾನಿ – Vishwanews24

Leave a Reply