ಪರ್ಕಳ: ಕಾರು-ರಿಕ್ಷಾ ಅಪಘಾತ ; ಗಂಭೀರ ಗಾಯಗೊಂಡಿದ್ದ ಪಾದಾಚಾರಿ ವ್ಯಕ್ತಿ ನಿಧನ – vishwanews24

Featured, ಉಡುಪಿ

ಪರ್ಕಳ: ಕಾರು-ರಿಕ್ಷಾ ಅಪಘಾತ ; ಗಂಭೀರ ಗಾಯಗೊಂಡಿದ್ದ ಪಾದಾಚಾರಿ ವ್ಯಕ್ತಿ ನಿಧನ

ಪರ್ಕಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಬಡಗುಬೆಟ್ಟು ಹಾಗೂ ಮಾಹಾಲಿಂಗೇಶ್ವರ ದೇವಸ್ಥಾನಕ್ಕೆ ಹೋಗುವ ತಿರುವಿನಲ್ಲಿ ಕಾರು ಮತ್ತು ರಿಕ್ಷಾ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾದಾಚಾರಿ ಮೃತಪಟ್ಟ ಘಟನೆ ನಡೆದಿದೆ.

ಆ.19 ರಂದು ನಡೆದ ಅವಘಡದಲ್ಲಿ ಪಾದಚಾರಿ ಅಶೋಕ್ ಶೆಟ್ಟಿಗಾರ್(64) ತಲೆಗೆ ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಮೃತಪಟ್ಟಿದ್ದಾರೆ.

ಈ ಪ್ರದೇಶದಲ್ಲಿ ದಿನನಿತ್ಯ ಎಂಬಂತೆ ಅಪಘಾತ ನಡೆಯುತ್ತಿದ್ದು, ಈಗಾಗಲೇ ಮೂರು ಅಪಘಾತದಿಂದ ಪ್ರಾಣಕಳೆದುಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗೆ ರಾತ್ರಿ ಹೊತ್ತು ಬೆಳಕು ಚೆಲ್ಲುವ ಬ್ಯಾರಿಕೆಗಳನ್ನು ಅಳವಡಿಸಬೇಕು. ಬಡಗುಬೆಟ್ಟಿನಿಂದ ಪರ್ಕಳಕ್ಕೆ ಸೇರುವ ಕೂಡೂ ರಸ್ತೆಗೆ ಉಬ್ಬು ನಿರ್ಮಾಣ ಮಾಡಬೇಕೆಂದು‌ ಸ್ಥಳೀಯರು ಆಗ್ರಹಿಸಿದ್ದಾರೆ.

ಮೃತರು ಎಂಐಟಿಯ ನಿವೃತ್ತ ಉದ್ಯೋಗಿಯಾಗಿದ್ದು. ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಮಿತರನ್ನು ಅಗಲಿದ್ದಾರೆ.

Leave a Reply