ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

Featured, ಉಡುಪಿ

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ

ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಆತ್ರಾಡಿಯಿಂದ ಪೇಪರ್ ಬಾಕ್ಸ್ ಗಳನ್ನು ತುಂಬಿ ಹುಬ್ಬಳ್ಳಿ ಕಡೆ ಪ್ರಯಾಣ ಬೆಳೆಸಿದ್ದ ಲಾರಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಪರ್ಕಳದ ಈ ಪ್ರದೇಶದಲ್ಲಿ ಬೃಹತ್ ವಾಹನಗಳು ಕೆಟ್ಟು ನಿಲ್ಲುರುವುದು, ಅಪಘಾತಗಳು ನಡೆಯುತ್ತಿರುವುದು ಸರ್ವೇಸಾಮಾನ್ಯವಾಗಿದೆ.

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಲಾರಿಯಿಂದ ಡೀಸೆಲ್ ಸೋರಿಕೆಯಾಗಿದೆ. ತತ್ ಕ್ಷಣ ಕಾರ್ಯಾಚರಣೆ ನಡೆಸಿ ಲಾರಿಯನ್ನು ಮೇಲಕ್ಕೆತ್ತಲಾಗಿದೆ.ಯಾರೊಬ್ಬರಿಗೂ ಗಾಯವಾದ ಬಗ್ಗೆ ವರದಿಯಾಗಿಲ್ಲ. ಎರಡು ದಿನಗಳ ಹಿಂದಷ್ಟೇ ಏರು ರಸ್ತೆಯಲ್ಲಿ ಲಾರಿಯೊಂದು ಕೆಟ್ಟು ನಿಂತು ವಾಹನ ಸವಾರರು ಪರದಾಡಬೇಕಾಗಿತ್ತು.

ಸಾರ್ವಜನಿಕರ ಆಕ್ರೋಶ
ಜನಪ್ರತಿನಿಧಿಗಳು, ಜಿಲ್ಲಾಡಳಿತ ವಾಹನ ಚಾಲಕರಿಗೆ, ಮಾಲಕರಿಗಾಗುವ ನಷ್ಟವನ್ನು ಮನಗಂಡು ಶೀಘ್ರ ಹಳೆ ರಸ್ತೆಯನ್ನಾದರೂ ಅಭಿವೃದ್ಧಿಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ನಿರಂತರ ವಾಹನ ಚಾಲಕರಿಗೆ ನಷ್ಟವನ್ನು ಉಂಟು ಮಾಡುವ ರಸ್ತೆಗೆ ಪೂರ್ಣ ಪ್ರಮಾಣದ ಕಾಯಕಲ್ಪವಾಗಬೇಕು , ಮತ್ತು ಪದೇ ಪದೇ ಈ ರೀತಿ ವಾಹನ ಚಾಲಕರಿಗೆ ಮಾಲಕರಿಗೆ ಆಗುವ ನಷ್ಟ ಭರಿಸುವವರು ಯಾರು ಎಂದು ಅಳಲು ತೋಡಿಕೊಂಡಿದ್ದಾರೆ.

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

Leave a Reply