ಪಾಕ್ ಪರ ಘೋಷಣೆ : ವೇದಿಕೆ ಮೇಲಿದ್ದ ಎಲ್ಲರ ಮೇಲೂ ದೇಶದ್ರೋಹ ಪ್ರಕರಣ ದಾಖಲಿಸಿ : ಅನಂತಕುಮಾರ್ ಹೆಗಡೆ -Vishwanews24
ಕಾರವಾರ: ಸಿಎಎ ವಿರೋಧಿ ಕಾರ್ಯಕ್ರಮದಲ್ಲಿ ಪಾಕ್ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ಮಾತ್ರವಲ್ಲದೇ ವೇದಿಕೆ ಮೇಲಿದ್ದ ಎಲ್ಲರ ಮೇಲೂ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ವಿಡಿಯೋ ಪ್ರತಿಕ್ರಿಯೆ ನೀಡಿರುವ ಅನಂತ್ ಕುಮಾರ್ ಹೆಗ್ಡೆ ಅವರು, ‘ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಸಿಎಎ ಹೋರಾಟ ಸಭೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಚಿಕ್ಕಮಗಳೂರು ಮೂಲದ ಅಮೂಲ್ಯ ಲಿಯೋನ ಜೊತೆಗೆ ವೇದಿಕೆ ಮೇಲಿರುವ ಎಲ್ಲರ ವಿರುದ್ಧ ದೇಶ ದ್ರೋಹದ ವಿರುದ್ಧ ಕೇಸು ದಾಖಲಿಸುವಂತೆ ಆಗ್ರಹಿಸಿದ್ದಾರೆ.
— Anantkumar Hegde (@AnantkumarH) February 20, 2020
