ಪುತ್ತೂರಿನ ರಾಕೇಶ್ ಕೃಷ್ಣ , ಬೆಂಗಳೂರಿನ ವೀರ್ ಕಶ್ಯಪ್ ಸೇರಿ ರಾಜ್ಯದ ಇಬ್ಬರ ಸಹಿತ 32 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿ -Vishwanews24
ಪುತ್ತೂರಿನ ರಾಕೇಶ್ ಕೃಷ್ಣ , ಬೆಂಗಳೂರಿನ ವೀರ್ ಕಶ್ಯಪ್ ಸೇರಿ ರಾಜ್ಯದ ಇಬ್ಬರ ಸಹಿತ 32 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿ -Vishwanews24
ನವದೆಹಲಿ: ಕರ್ನಾಟಕ ರಾಜ್ಯದ ಇಬ್ಬರು ಮಕ್ಕಳು ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇಂದ್ರ ಸರ್ಕಾರ ನೀಡುವ 2021ನೇ ಸಾಲಿನ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ’ ಪ್ರಶಸ್ತಿಗೆ ಒಟ್ಟು 32 ಮಕ್ಕಳು ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಹಾಗೂ ಬೆಂಗಳೂರಿನ ವೀರ್ ಕಶ್ಯಪ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರಿಬ್ಬರಿಗೂ ಆವಿಸ್ಕಾರ ವಲಯದಲ್ಲಿ ಪುರಸ್ಕಾರ ಲಭಿಸಿದೆ.
ಇದನ್ನೂ ಓದಿ : ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ 40 ಕೋಟಿ ರೂ. ಬಿಡುಗಡೆ : ಸದಾನಂದ ಗೌಡ -Vishwanews24
32 ಮಕ್ಕಳ ಪೈಕಿ ನಾವೀನ್ಯತೆ ವಿಭಾಗದಲ್ಲಿ 9, ಕಲೆ ಸಂಸ್ಕೃತಿ ವಿಭಾಗದಲ್ಲಿ 7, ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆ ವಿಭಾಗದಲ್ಲಿ 5, ಶೌರ್ಯ ವಿಭಾಗ 3 ಹಾಗೂ ಸಾಮಾಜಿಕ ಸೇವಾ ವಿಭಾಗದಲ್ಲಿ ಒಬ್ಬ ಮಕ್ಕಳಿಗೆ ಪ್ರಶಸ್ತಿ ಲಭಿಸಿದೆ.
ಸರ್ಕಾರ ಪ್ರತೀ ವರ್ಷ ಬಾಲ ಪ್ರತಿಭೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯ ಪದಕ 1 ಲಕ್ಷ ನಗದು ಒಳಗೊಂಡಿದೆ. ವಿಜೇತರೊಂದಿಗೆ ಪ್ರಧಾನಿ ಮೋದಿ ಇಂದು ಮಧ್ಯಾಹ್ನ 12 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ಇದನ್ನೂ ಓದಿ : ಉಡುಪಿ : ಜಿಲ್ಲಾ ಗಣರಾಜ್ಯೋತ್ಸವ ಕ್ರಿಕೆಟ್ ಕಪ್ ಗೆದ್ದ ಕರಾವಳಿ ಕಾವಲು ಪೊಲೀಸ್ ತಂಡ -Vishwanews24
ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ರಾಕೇಶ್ ಕೃಷ್ಣ ಮತ್ತು ವೀರ್ ಕಶ್ಯಪ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ‘ಆವಿಷ್ಕಾರ ವಿಭಾಗದಲ್ಲಿ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ದಕ್ಷಿಣ ಕನ್ನಡದ 15 ವರ್ಷದ ಕೆ.ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್ಗೆ ಅಭಿನಂದನೆಗಳು. ನಿಮ್ಮ ಸಾಧನೆ ರಾಜ್ಯಕ್ಕೆ ಹೆಮ್ಮೆ ತರುವ ಜೊತೆಗೆ ಇತರ ಮಕ್ಕಳಿಗೆ ಮಾದರಿಯಾಗಿದೆ’ ಎಂದು ಶ್ಲಾಘಿಸಿದ್ದಾರೆ.
'ಆವಿಷ್ಕಾರ ವಿಭಾಗದಲ್ಲಿ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ದಕ್ಷಿಣ ಕನ್ನಡದ 15 ವರ್ಷದ ಕೆ. ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್ಗೆ ಅಭಿನಂದನೆಗಳು. ನಿಮ್ಮ ಸಾಧನೆ ರಾಜ್ಯಕ್ಕೆ ಹೆಮ್ಮೆ ತರುವ ಜೊತೆಗೆ ಇತರ ಮಕ್ಕಳಿಗೆ ಮಾದರಿಯಾಗಿದೆ' : ಮುಖ್ಯಮಂತ್ರಿ @BSYBJP.
— CM of Karnataka (@CMofKarnataka) January 25, 2021
ಇದನ್ನೂ ಓದಿ : ಕಾಪು SCDCC ಬ್ಯಾಂಕ್- ಜನವರಿ 28 ರಂದು ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ-vishwanews24
