ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – ಆರೋಪಿಗಳು ನ. 22 ರ ವರೆಗೆ ನ್ಯಾಯಾಂಗ ಬಂಧನಕ್ಕೆ  – vishwanews24

Featured, ದಕ್ಷಿಣ ಕನ್ನಡ

ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – ಆರೋಪಿಗಳು ನ. 22 ರ ವರೆಗೆ ನ್ಯಾಯಾಂಗ ಬಂಧನಕ್ಕೆ

ಪುತ್ತೂರು: ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ನವೆಂಬರ್ 22 ರ ತನಕ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ.

ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನವೆಂಬರ್ 22 ರ ತನಕ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ. ಮಂಗಳವಾರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರು ಪಡಿಸಲಾಗಿತ್ತು. ಆದ್ರೆ ನ್ಯಾಯಾಧೀಶರ ಆದೇಶ ಮೇರೆಗೆ ಬುಧವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನವೆಂಬರ 22ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ. ಸೋಮವಾರ ತಡರಾತ್ರಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರ ತಂಡ ತಲವಾರಿನಿಂದ ಹತ್ಯೆ ಮಾಡಿತ್ತು. ಅದಾದ ಬಳಿಕ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು.ಪುತ್ತೂರು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Reply