ಪುತ್ತೂರು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

Featured, ದಕ್ಷಿಣ ಕನ್ನಡ

ಪುತ್ತೂರು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ಮಂಜುಶ್ರೀ (20) ಮೃತ ಯುವತಿ. ಮಂಜುಶ್ರೀ ವಿವೇಕಾನಂದ ಕಾಲೇಜಿನಲ್ಲಿ ಪದವಿ ಓದುತ್ತಿದ್ದರು.

ಬ್ರಹ್ಮಾವರ : ಪ್ರತಿಷ್ಠಿತ ವಿದ್ಯಾ ಸಂಸ್ಥೆ ಜಿ. ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಡಾ. ಧನಂಜಯ ಸರ್ಜಿ ಮತಯಾಚನೆ – vishwanews24

ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಕ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು. ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ(ಮೇ 24) ರಾತ್ರಿ ಮೃತಪಟ್ಟಿದ್ದಾರೆ.

ಉಡುಪಿ: ಪಕ್ಷದ ಶಿಸ್ತು ಉಲ್ಲಂಘನೆಯ ಬಗ್ಗೆ ನನಗೆ ನೋಟಿಸ್‌ ತಲುಪಿಲ್ಲ, ತಲುಪಿದ ಕೂಡಲೇ ಉತ್ತರಿಸುವೆ : ರಘುಪತಿ ಭಟ್‌ – vishwanews24

Leave a Reply