ಪುತ್ತೂರು: ಉದ್ಯಮಿ ಅಶೋಕ್ ಕುಮಾರ್ ರೈ ಗೆ  ಕಾಂಗ್ರೆಸ್ ಟಿಕೆಟ್ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು: ಉದ್ಯಮಿ ಅಶೋಕ್ ಕುಮಾರ್ ರೈ ಗೆ  ಕಾಂಗ್ರೆಸ್ ಟಿಕೆಟ್

ಪುತ್ತೂರು: ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಸಿದ್ದು, ತೀವ್ರ ಕುತೂಹಲ ಮೂಡಿಸಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಮಿ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರ ಆಪ್ತರಾಗಿ ಗುರುತಿಸಿಕೊಂಡಿದ್ದ ಅಶೋಕ್ ಕುಮಾರ್ ರೈ ಬಿಜೆಪಿಯಲ್ಲಿದ್ದರು. ಇತ್ತೀಚೆಗಷ್ಟೇ ಅವರು ಕಾಂಗ್ರೆಸ್ ಗೆ ಪಕ್ಷಾಂತರಗೊಂಡಿದ್ದರು.

ಪುತ್ತೂರು ತಾಲೂಕಿನ ಕೋಡಿಂಬಾಡಿ ನಿವಾಸಿಯಾಗಿರುವ ಇವರು ಉದ್ಯಮಿಯಾಗಿದ್ದು, ರೈ ಎಸ್ಟೇಟ್ ಮಾಲಕರಾಗಿದ್ದಾರೆ.

ಅಥಣಿಯಿಂದ ಲಕ್ಷ್ಮಣ ಸವದಿಗೆ ಕಾಂಗ್ರೆಸ್ ಟಿಕೆಟ್  – Vishwanews24

ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ಮೂಲಕ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು, ಮುಖ್ಯವಾಗಿ ಮನೆ, ರಸ್ತೆ, ಸ್ವ ಉದ್ಯೋಗ ಇನ್ನಿತರ ನಿರ್ಮಾಣ ಕಾರ್ಯ ಗಳಿಗೆ ನೆರವು ನೀಡುತ್ತಾ ಬಂದವರು.

 

Leave a Reply