ಪುತ್ತೂರು : ಪುತ್ತಿಲ ಬಿಜೆಪಿ ಸೇರ್ಪಡೆ ಮಾಧ್ಯಮಗಳ ಸೃಷ್ಟಿ : ಜಿಲ್ಲಾಧ್ಯಕ್ಷ ಸತೀಶ್ ಕುಂಪಲ – Vishwanews24
ಪುತ್ತೂರು : ಅರುಣ್ ಪುತ್ತಿಲ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿದ್ದು ನಾವಲ್ಲ, ಮಾಧ್ಯಮದವರು : ಜಿಲ್ಲಾಧ್ಯಕ್ಷ ಸತೀಶ್ ಕುಂಪಲ
ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ಇನ್ನೂ ಗೊಂದಲಗಳು ಮುಂದುವರೆದಿದ್ದು, ಬಿಜೆಪಿ ವಿರುದ್ದ ಬಂಡಾಯ ಎದ್ದು ಇದೀಗ ಮತ್ತೆ ಬಿಜೆಪಿ ಸೇರ್ಪಡೆಗೆ ಕಾಯುತ್ತಿದ್ದ ಪುತ್ತಿಲ ಪರಿವಾರದ ಅರುಣ್ ಪುತ್ತಿಲ ರಿಗೆ ಮತ್ತೆ ವಿಘ್ನ ಎದುರಾಗಿದೆ. ಇದೀಗ ಪುತ್ತೂರಿನ ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದು, ಶುಕ್ರವಾರ ಮಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸದಸ್ಯತ್ವ ಪಡೆದುಕೊಳ್ಳುವ ಕಾರ್ಯಕ್ರಮ ಕೊನೆಕ್ಷಣದಲ್ಲಿ ನಡೆಯಲೇ ಇಲ್ಲ.
ಬೆಂಗಳೂರಿನಲ್ಲಿ ಗುರುವಾರ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸಮುಖ ಬೇಷರತ್ತಾಗಿ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಯಾಗುತ್ತಾರೆ ಅಲ್ಲದೆ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರ ಬಿಜೆಪಿಯಲ್ಲಿ ವಿಲೀನಗೊಂಡಿದ್ದು, ಲೋಕಸಭಾಚುನಾವಣೆಯನ್ನು ಒಟ್ಟಾಗಿ ಎದುರಿಸುವ ಬಗ್ಗೆ ಇಬ್ಬರೂ ಮಾಧ್ಯಮಕ್ಕೆ ತಿಳಿಸಿದ್ದರು.ಹೀಗಾಗಿ ಮರುದಿನ ಮಂಗಳೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಹಾಗೂ ಪರಿವಾರ ಅಧಿಕೃತವಾಗಿ ನಡೆಯಬೇಕಿತ್ತು. ಸೇರ್ಪಡೆಗೊಳ್ಳುವ ಪ್ರಕ್ರಿಯೆ ನಡೆಬೇಕಿತ್ತು.
ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ : ಖರ್ಗೆ ತವರಿನಿಂದಲೇ ಪ್ರಧಾನಿ ಅಬ್ಬರದ ಪ್ರಚಾರಕ್ಕೆ ಚಾಲನೆ – Vishwanews24
ಜಿಲ್ಲಾ ಬಿಜೆಪಿ ಕಚೇರಿ ಮತ್ತು ಚುನಾವಣಾ ಕಚೇರಿಗೆ ತೆರಳಲು ಅರುಣ್ ಕುಮಾರ್ ಪುತ್ತಿಲ ಶುಕ್ರವಾರ ಸಿದ್ಧವಾಗಿದ್ದರು. ಸಂಜೆ ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರ ಕಚೇರಿಯಲ್ಲಿ ಕುಳಿತು ಮಂಗಳೂರಿಗೆ ತೆರಳಲು ಜಿಲ್ಲಾಧ್ಯಕ್ಷರ ಸಂದೇಶಕ್ಕೆ ಕಾಯುತ್ತಿದ್ದರು ಎನ್ನಲಾಗಿತ್ತು. ಪುತ್ತಿಲ ಪರಿವಾರದ ಕಾರ್ಯಕರ್ತರು ಮಂಗಳೂರಿಗೆ ತೆರಳಲು 40 ಕಾರುಗಳು ಸಿದ್ಧವಾಗಿದ್ದವು. ಈ ನಡುವೆ, ಸಂಜೆ 5.30ರ ಹೊತ್ತಿಗೆ ಪುತ್ತೂರಿಗೆ ಆಗಮಿಸಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ರಾತ್ರಿ 8 ಗಂಟೆ ತನಕ ಪಕ್ಷದ ಕಚೇರಿಯಲ್ಲಿ ಬಾಗಿಲು ಮುಚ್ಚಿ ಸಭೆ ನಡೆಸಿದರು. ಬಳಿಕ ಹೊರ ಬಂದು ಪುತ್ತಿಲ ಬಿಜೆಪಿ ಸೇರ್ಪಡೆ ಮಾಧ್ಯಮಗಳ ಸೃಷ್ಟಿ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಇದರಿಂದಾಗಿ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಖಂಡರ ತಡೆ ಇರುವುದು ಸ್ಪಷ್ಟವಾಗಿದೆ.
ಶುಕ್ರವಾರ ನಡೆದ ಸಭೆಯಲ್ಲಿ ಪಕ್ಷದ ಮುಖಂಡರಾದ ಸುಲೋಚನಾ ಭಟ್, ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಮಾಜಿ ಶಾಸಕ ಸಂಜೀವ ಮಠಂದೂರು, ಡಾ.ಎಂ.ಕೆ. ಪ್ರಸಾದ್, ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್. ಸಿ. ನಾರಾಯಣ್, ಪ್ರಮುಖರಾದ ಗೋಪಾಲಕೃಷ್ಣ ಹೇರಳೆ, ಅಪ್ಪಯ್ಯ ಮಣಿಯಾಣಿ, ಭಾಮಿ ಅಶೋಕ್ ಶೆಣೈ, ರಾಧಾಕೃಷ್ಣ ಬೋರ್ಕರ್ ಜೀವಂಧರ ಜೈನ್, ರಾಜೇಶ್ ಬನ್ನೂರು, ಚಂದ್ರಶೇಖರ ರಾವ್ ಬಪ್ಪಳಿಗೆ, ಅಜಿತ್ ರೈ ಹೊಸಮನೆ, ದಿನೇಶ್ ಪಂಜಿಗ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣ: ಬಟ್ಟೆ ವ್ಯಾಪಾರಿ ಬಂಧನ – Vishwanews24
ಈ ನಡುವೆ ದಕ್ಷಿಣಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿದ್ದು ನಾವಲ್ಲ ಅದು ಮಾಧ್ಯಮದವರು ಎಂದು ಹೇಳಿ ನೀಡುವ ಮೂಲಕ ಉಲ್ಟಾ ಹೊಡೆದಿದ್ದರು.
