ಪುತ್ತೂರು : ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ಪ್ರಕರಣ # 6 ಮಂದಿ ಅರೆಸ್ಟ್ – Vishwanews24

Featured, ದಕ್ಷಿಣ ಕನ್ನಡ

ಪುತ್ತೂರು : ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ಪ್ರಕರಣ – 6 ಮಂದಿ ಅರೆಸ್ಟ್

ಪುತ್ತೂರು : ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ. 7ರಂದು ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.

ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದು, ಈತ ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.

ಕರ್ನಾಟಕ ಬಂದ್​ : ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ – Vishwanews24

ಇನ್ನು ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.

Leave a Reply