ಪೊಲೀಸ್‌ ಇಲಾಖೆಯನ್ನು ದುರುಪಯೋಗ ಪಡಿಸಿ ಸುಳ್ಳು ಕೇಸು ಹಾಕಿ ಪದೇ ಪದೇ ದಾಳಿ ; SDPI ಯನ್ನು ರಾಜಕೀಯವಾಗಿ ಎದುರಿಸಲು ನಿಮಗೆ ಧಮ್ ಇಲ್ಲವಾ ? :- ರಿಯಾಝ್ ಕಡಂಬು

Featured, ದಕ್ಷಿಣ ಕನ್ನಡ

ಪೊಲೀಸ್‌ ಇಲಾಖೆಯನ್ನು ದುರುಪಯೋಗ ಪಡಿಸಿ ಸುಳ್ಳು ಕೇಸು ಹಾಕಿ ಪದೇ ಪದೇ ದಾಳಿ ; ಎಸ್‌ಡಿಪಿಐ ನ್ನು ರಾಜಕೀಯವಾಗಿ ಎದುರಿಸಲು ನಿಮಗೆ ಧಮ್ ಇಲ್ಲವಾ ? :- ರಿಯಾಝ್ ಕಡಂಬು

ಮಂಗಳೂರು : ‘ಪೊಲೀಸ್‌ ಇಲಾಖೆಯನ್ನು ದುರುಪಯೋಗ ಪಡಿಸಿ ಸುಳ್ಳು ಕೇಸು ಹಾಕುತ್ತಿದ್ದಾರೆ. ಎಡಿಜಿಪಿ ಅಲೋಕ್‌ ಕುಮಾರ್ ಅವರು ಎಸ್‌ಡಿಪಿಐ ಕಚೇರಿಗೆ ದಾಳಿ ಮಾಡಬಾರದು ಎಂದು ಸ್ಪಷ್ಟವಾಗಿ ಹೇಳಿದ್ದರೂ ಜಿಲ್ಲೆಯಲ್ಲಿ ಪೊಲೀಸ್ ಕಮಿಷನರ್‌ ಮುಂದಿಟ್ಟುಕೊಂಡು ನಿರಂತರ ದಾಳಿ ಆಗುತ್ತಿದೆ.

ಇವರಿಗೆ ನಿರ್ದೇಶನ ನೀಡಿದವರು ಯಾರು..? ಇಡೀ ದೇಶದಲ್ಲಿ ದ.ಕ ಜಿಲ್ಲೆಯಲ್ಲಿ ಮಾತ್ರ ಇಂತಹ ದಾಳಿಗಳು ಯಾಕೆ ಆಗುತ್ತಿದೆ. ಹಾಗಾದರೆ ಕಮಿಷನರ್ ಕೇವಲ ಇದನ್ನು ಫೇಮಸ್ ಆಗೋಕೆ ಮಾಡ್ತಿದ್ದಾರಾ? ರಾಜಕೀಯ ಪ್ರಭಾವಿ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಹೀಗೆ ಮಾಡ್ತಿದ್ದಾರಾ? ಕೂತರೂ ನಿಂತರೂ ಪ್ರೆಸ್‌ಮೀಟ್ ಮಾಡುವ ಕಮಿಷನರ್ ಇದರ ಬಗ್ಗೆ ಯಾಕೆ ಮಾತಾಡುತ್ತಿಲ್ಲ. ಎಸ್‌ಡಿಪಿಐ ನ್ನು ರಾಜಕೀಯವಾಗಿ ಎದುರಿಸಲು ನಿಮಗೆ ಧಮ್ ಇಲ್ಲವಾ?’ ಎಂದು ರಾಜ್ಯ ಸಮಿತಿ ಮಾಧ್ಯಮ ಸಂಯೋಜಕ ರಿಯಾಝ್ ಕಡಂಬು ಪ್ರಶ್ನಿಸಿದರು.

ಪುತ್ತೂರು: KSRTC ಬಸ್‌ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ ಹೆಸರು : ಸರಕಾರದಿಂದ ಅನುಮೋದನೆ – Vishwanews24

ಪದೇ ಪದೇ ದಾಳಿ ಹಾಗೂ ಸಂಘಟನೆಗಳ ಕಚೇರಿಯನ್ನು ಮುಚ್ಚುತ್ತಿರುವ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ‘ಕಚೇರಿಗೆ ಬೀಗ ಹಾಕುವುದು , ರಾತ್ರಿ ವೇಳೆ ದಾಳಿ ಏಕೆ..? ಅಮಾಯಕರನ್ನು ಬಂಧಿಸಲಾಗುತ್ತದೆ. ನಮ್ಮದು ರಾಜಕೀಯ ಪಕ್ಷ. ನಮ್ಮ ಸಂಘಟನೆಯ ಸದುದ್ದೇಶ ಜನರಿಗೆ ತಿಳಿದಿರುವುದರಿಂದ ದಲಿತರು, ಕ್ರೈಸ್ತರು ಎಲ್ಲರೂ ನಮ್ಮ ಸಂಘಟನೆಗೆ ಸೇರುತ್ತಿದ್ದಾರೆ. ಇದನ್ನು ನೋಡಿ ಸಹಿಸಲಾಗದ ಬಿಜೆಪಿ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾವಣಾ ಆಯೋಗವೇ ನಮ್ಮ ಎಸ್‌ಡಿಪಿಐ ಸಂಘಟನೆ ಸಂವಿಧಾನ ತತ್ವಗಳ ಮೂಲಕ ಕೆಲಸ ಮಾಡುತ್ತಿದೆ ಎಂದು ಕ್ಲೀನ್‌ಚಿಟ್ ಕೊಟ್ಟಿರುವಾಗ ದ.ಕ ಜಿಲ್ಲೆಯಲ್ಲಿ ಮಾತ್ರ ಯಾಕೆ ಇಂತಹ ಪ್ರಕ್ರಿಯೆಗಳು ನಡೆಯುತ್ತಿದೆ’ ಎಂದು ಹೇಳಿದರು.

ಮಂಗಳೂರು: ಅಲೆಗಳ ತೀವ್ರತೆಯಿಂದ ಆಯ ತಪ್ಪಿ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ – Vishwanews24

Leave a Reply