ಪ್ರತಿಷ್ಠಿತ ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ನಿಧನ -Vishwanews24
ಬಂಟ್ವಾಳ: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅವರು ಆ. 16ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಟಿಂಬರ್ ಉದ್ಯಮದಲ್ಲಿ ಖ್ಯಾತಿಯನ್ನು ಪಡೆದಿರುವ ಅಹ್ಮದ್ ಹಾಜಿ ಅವರು ಶಿಕ್ಷಣ ಪ್ರೇಮಿಯಾಗಿದ್ದು ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ವಿತೀಯ ಸಾಧಕರಾಗಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಬಿ.ಎ.ಸಮೂಹ ಸಂಸ್ಥೆಗಳ ಮೂಲಕ ಸಾವಿರಾರು ಮಂದಿಯ ಉದ್ಯೋಗದಾತರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅಹ್ಮದ್ ಹಾಜಿ ಅವರ ಪಾರ್ಥಿವ ಶರೀರವನ್ನು ಅಪರಾಹ್ನ 3 ಗಂಟೆಗೆ ತುಂಬೆಯಲ್ಲಿರುವ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. 4 ಗಂಟೆಯ ಬಳಿಕ ತುಂಬೆ ಮಸೀದಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ.
