ಪ್ರವೀಣ್​ ​ ಹತ್ಯೆ ಪ್ರಕರಣ – ಇಂದು ದಕ್ಷಿಣ ಕನ್ನಡ ಎಸ್ಪಿಯಿಂದ ಮಹತ್ವದ ಸುದ್ದಿಗೋಷ್ಟಿ – Vishwanews24

Featured, ದಕ್ಷಿಣ ಕನ್ನಡ

ಪ್ರವೀಣ್​ ​ ಹತ್ಯೆ ಪ್ರಕರಣ – ಇಂದು ದಕ್ಷಿಣ ಕನ್ನಡ ಎಸ್ಪಿಯಿಂದ ಮಹತ್ವದ ಸುದ್ದಿಗೋಷ್ಟಿ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರ್​ ಹತ್ಯೆ ಪ್ರಕರಣದ ಬಗ್ಗೆ ಪ್ರಮುಖ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದು, ಈ ಕುರಿತು ಮಾಹಿತಿ ನೀಡಲು ದಕ್ಷಿಣ ಕನ್ನಡ ಪೊಲೀಸ್​ ವರಿಷ್ಠಾಧಿಕಾರಿ ಆ. 11ರ ಮಧ್ಯಾಹ್ನ 12.30ಕ್ಕೆ ಪತ್ರಿಕಾಗೋಷ್ಟಿ ಕರೆದಿದ್ದಾರೆ.

ಪ್ರಮುಖ ಮೂವರು ಆರೋಪಿಗಳು ಆರು ಜಿಲ್ಲೆಯಲ್ಲಿ ಈವರೆಗೆ ಕಣ್ತಪ್ಪಿಸಿ ಓಡಾಟ ನಡೆಸುತ್ತಿದ್ದು, ಬೆಳ್ಳಾರೆ ಆಸುಪಾಸಿನವರೇ ಈ ಕೃತ್ಯದಲ್ಲಿ ಭಾಗಿಯದವರು ಎಂದು ತಿಳಿದುಬಂದಿದೆ. ಹಂತಕರು ಸಾಕಷ್ಟು ವ್ಯವಸ್ಥಿತ ತಯಾರಿ ನಡೆಸಿ ಸಂಚು ರೂಪಿಸಿ ಪ್ರವೀಣ್​​ ಹತ್ಯೆ ನಡೆಸಿದ್ದಾರೆ. ಹತ್ಯೆಗೆ ಬೈಕ್ ನೀಡಿದ್ದ ಆರೋಪಿ ಸುಳ್ಯದ ಕಬೀರ್​ನನ್ನು ಆಗಸ್ಟ್​ 9ರಂದು ಬಂಧಿಸಲಾಗಿದೆ. ತನ್ನ‌ ಪರಿಚಯಸ್ಥನ ಬೈಕ್ ಪಡೆದಿದ್ದ ಕಬೀರ್​, ಅದನ್ನು ಹಂತಕರಿಗೆ ನೀಡಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ.

 

 

Leave a Reply