ಪ್ರೇಯಸಿ ಸೇರಿ ತನ್ನ ಕುಟುಂಬದ ಐವರನ್ನು ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಯುವಕ – vishwanews24
ಪ್ರೇಯಸಿ ಸೇರಿ ತನ್ನ ಕುಟುಂಬದ ಐವರನ್ನು ಹತ್ಯೆ ಮಾಡಿ ಪೊಲೀಸರಿಗೆ ಶರಣಾದ ಯುವಕ
ತಿರುವನಂತಪುರಂ: ಕೇರಳದಲ್ಲಿ ಯುವಕನೊಬ್ಬ ಪ್ರೇಯಸಿ ಹಾಗೂ ತನ್ನ ಕುಟುಂಬದ ಐವರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
23 ವರ್ಷದ ಯುವಕ ತನ್ನ 13 ವರ್ಷದ ಸಹೋದರ, 80 ವರ್ಷದ ಅಜ್ಜಿ ಮತ್ತು ಪ್ರೇಯಸಿ ಸೇರಿ 6 ಜನರನ್ನು ಕೊಂದು ಪೊಲೀಸರಿಗೆ ಶರಣಾಗಿರುವ ಘಟನೆ ತಿರುವನಂತಪುರಂನ ವೆಂಜರಮೂಡುವಿನಲ್ಲಿ ನಡೆದಿದೆ.
ಆರೋಪಿ ಅಫಾನ್ ವಿಷ ಸೇವಿಸಿ ಬಂದು ಠಾಣೆಯಲ್ಲಿ ತಪ್ಪೊಪ್ಪಿಕೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಕಳ: ಶರಣಾದ ನಾಲ್ವರು ನಕ್ಸಲರು ಕೋರ್ಟ್ ಗೆ ಹಾಜರು – vishwanews24
ಅಫಾನ್ ತನ್ನ ಮನೆಯವರನ್ನು ಕೊಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಹಲ್ಲೆಗೊಳಗಾದ ಐವರು ಸಾವನ್ನಪ್ಪಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಅಫಾನ್ ತಾಯಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಶರಣಾಗುವ ಮೊದಲು ವಿಷ ಸೇವಿಸಿರುವುದಾಗಿ ಹೇಳಿಕೊಂಡಿದ್ದ, ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆಯ ಸಾಲ ತೀರಿಸಲು ಈ ಕೊಲೆ ಮಾಡಲಾಗಿದೆ ಎಂದು ಆರೋಪಿ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ. ಅವನಿಗೆ ತನ್ನ ತಂದೆಯ ಸಾಲವನ್ನು ತೀರಿಸಲು ಯಾವುದೇ ಮಾರ್ಗ ಕಾಣಲಿಲ್ಲ. ನಾನು ನನ್ನ ಸಂಬಂಧಿಕರನ್ನು ಸಂಪರ್ಕಿಸಿದಾಗ, ಅವರು ಸಹ ಸಹಾಯ ಮಾಡಲಿಲ್ಲ. ಸೇಡು ತೀರಿಸಿಕೊಳ್ಳುವುದೇ ಕೊಲೆಗೆ ಕಾರಣ ಎಂದು ಅಫಾನ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಪುತ್ತೂರು: ಸಿಸೇರಿಯನ್ ಹೆರಿಗೆ ಬಳಿಕ ಹೊಟ್ಟೆಯೊಳಗೆ ಬಟ್ಟೆಯ ತುಂಡು ಆರೋಪ ; ತನಿಖೆ ಆರಂಭ – vishwanews24
ವೆಂಜರಮೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
