ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು – Vishwanews24

Featured, ರಾಷ್ಟ್ರ ನ್ಯೂಸ್

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಕಣಗಿಲೆ ಹೂ ತಿಂದ ಯುವತಿ ಸಾವು

ಕೇರಳ: ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ ಕೇರಳದಲ್ಲಿ ನಡೆದಿದೆ.

ಸೂರ್ಯ ಸುರೇಂದ್ರನ್ ಎಂಬ 24 ವರ್ಷದ ಯುವತಿ ಓಲಿಯಾಂಡರ್ ಹೂವು ಸ್ಥಳೀಯವಾಗಿ ಮಲಯಾಳಂ ಭಾಷೆಯಲ್ಲಿ ‘ಅರಳಿ ಪೂ’ ಎಂದು ಕರೆಯಲಾಗುವ ಹೂವು ತಿಂದಿದ್ದಾಳೆ. ವೃತ್ತಿಯಲ್ಲಿ ನರ್ಸ್ ಆಗಿರುವ ಯುವತಿ, ಭಾನುವಾರದಂದು ತನ್ನ ಹೊಸ ಕೆಲಸವನ್ನು ಪ್ರಾರಂಭಿಸಲು ನೆಡುಂಬಸ್ಸೆರಿ ವಿಮಾನ ನಿಲ್ದಾಣದಿಂದ ಗುರುವಾರ ಯುಕೆಗೆ ಪ್ರಯಾಣಿಸಲು ಸಿದ್ಧತೆ ನಡೆಸಿದ್ದಳು. ಆದರೆ ಇದ್ದಕ್ಕಿದ್ದಂತೆ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದ ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಆಕೆಯ ಸಾವಿಗೆ ಕಾರಣ ಹೃದಯಾಘಾತ ಎಂದು ಘೋಷಿಸಲಾಗಿದೆ.

ಕುಂದಾಪುರ: ಬಸ್ ಡಿಕ್ಕಿ – ಪಾದಾಚಾರಿ ಮಹಿಳೆ ಸ್ಥಳದಲ್ಲಿಯೇ ಸಾವು – Vishwanews24

ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಆಕೆಯ ರಕ್ತದಲ್ಲಿ ವಿಷಕಾರಿ ಅಂಶ ಕಂಡುಬಂದಿದೆ. ಆಕೆಯ ಹಠಾತ್ ಸಾವಿನ ಕಾರಣವನ್ನು ಪತ್ತೆ ಹಚ್ಚಲಾಗಿದೆ ಎಂದು ಹರಿಪಾಡ್ ಠಾಣಾಧಿಕಾರಿ ಕೆ.ಅಭಿಲಾಷ್‌ಕುಮಾರ್ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅರಳಿ ಹೂವು ಮತ್ತು ಎಲೆ ತಿಂದದ್ದೇ ಸಾವಿಗೆ ಕಾರಣ ಎಂದು ತಿಳಿದು ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ಫೋನ್‌ನಲ್ಲಿ ಮಾತನಾಡುವಾಗ, ಅವಳು ಹೂವನ್ನು ಕಿತ್ತು ಸೇವಿಸಿದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಆಕೆ ನಿರಂತರವಾಗಿ ವಾಂತಿ ಮಾಡಿಕೊಂಡಿದ್ದಳು ಎಂದು ತಿಳಿದು ಬಂದಿದೆ.

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ – Vishwanews24

Leave a Reply