ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ , ಬೈಕ್ ಸವಾರ ಸಾವು – VIshwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ , ಬೈಕ್ ಸವಾರ ಸಾವು – VIshwanews24

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ -75ರ ಮೆಲ್ಕಾರ್ ಜಂಕ್ಷನ್ ನಲ್ಲಿ ಮಂಗಳವಾರ ತಡರಾತ್ರಿ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟ ಘಟನೆ ನಡೆದಿದೆ.

ಅಪಘಾತದಿಂದ ಸಾವನ್ನಪ್ಪಿದ ಸವಾರನನ್ನು ಮಂಗಳೂರು ನಿವಾಸಿ (೩೬) ಗಣೇಶ್ ಎಂದು ಎಂದು ಗುರುತಿಸಲಾಗಿದೆ. ಮಾಣಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಮತ್ತು ಮೆಲ್ಕಾರ್ ನಿಂದ ಸಜಿಪ ಕಡೆ ಹೋಗುತ್ತಿದ್ದ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಿ.ಸಿ.ರೋಡ್ ಕಡೆಯಿಂದ ಬಂದ ಬೈಕ್ ಸವಾರ ಸಜಿಪ ಹೋಗುವ ರಸ್ತೆಗೆ (ಬಲಕ್ಕೆ) ತಿರುಗಿದ್ದು, ಈ ವೇಳೆ ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪೇಟೆಯಲ್ಲಿರುವ ವೃತ್ತಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವೃತ್ತವು ಸಂಪೂರ್ಣ ನಜ್ಜುಗುಜ್ಜಾಗಿದೆ.

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು : ನವೆಂಬರ್‌ 18ರಿಂದ ರಾತ್ರಿ 11.30ರವರೆಗೆ ಮೆಟ್ರೋ ಸಂಚಾರ , ತಡರಾತ್ರಿ ಕೆಲಸ ಮುಗಿಸಿ ಹೊರಡುವವರಿಗೆ ಅನುಕೂಲ – Vishwanews24