ಬಜೆಟ್ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ – vishwanews24
ಸರ್ಕಾರದ ಶೂನ್ಯ ಸಾಧನೆ, ವೈಫಲ್ಯಗಳ ವಿರುದ್ಧ ಬಿಜೆಪಿ-ಜೆಡಿಎಸ್ ಧರಣಿ
ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಲಿದ್ದಾರೆ. ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಬಜೆಟ್ಗೂ ಮುನ್ನ ಬಿಜೆಪಿ, ಜೆಡಿಎಸ್ ಪ್ರತಿಭಟನೆ ನಡೆಸಿದೆ.
ಬೆಳಗ್ಗೆ 9:30 ಕ್ಕೆ ವಿಧಾನಸೌಧ ಗಾಂಧಿ ಪ್ರತಿಮೆ ಎದುರು ಮೈತ್ರಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಎಸ್ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಸಬಾರದು, ಶಾಸಕರ ಕ್ಷೇತ್ರಗಳಿಗೆ ತಲಾ 150 ಕೋಟಿ ಅನುದಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದ ಅಧಿಕ ಸಾಲಗಳ ಮತ್ತೊಂದು ಬಜೆಟ್ ಎಂದು ಆಪಾದಿಸಿ, ಗಾಂಧಿ ಪ್ರತಿಮೆಯಿಂದ ಕೆಂಗಲ್ ಗೇಟ್ ವರೆಗೆ ಪ್ರತಿಭಟನಾ ಮೆರಣಿಗೆ ನಡೆಸಲು ದೋಸ್ತಿಗಳು ಯೋಜಿಸಿದ್ದಾರೆ ಎನ್ನಲಾಗಿದೆ.
ರಾಹುಕಾಲಕ್ಕೂ ಮುನ್ನ ಸಿಎಂ ಬಜೆಟ್ ಮಂಡನೆ ಆರಂಭ ಮಾಡಲಿದ್ದಾರೆ. ಕಳೆದ ವರ್ಷವೂ ರಾಹುಕಾಲಕ್ಕೂ ಮುನ್ನ ಬಜೆಟ್ ಮಂಡನೆ ಆರಂಭಿಸಿದ್ದರು
