ಬಡವರ ಬಿಪಿಎಲ್ ಕಾರ್ಡ್ ರದ್ದುಗೊಳಿಸದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ : ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ – vishwanews24

Featured, ದಕ್ಷಿಣ ಕನ್ನಡ

ಬಡವರ ಬಿಪಿಎಲ್ ಕಾರ್ಡ್ ರದ್ದುಗೊಳಿಸದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ : ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ

ಪುತ್ತೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್‍ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್‍ಗಳೆಂದು ಗುರುತಿಸಿ ರದ್ದುಗೊಳಿಸಲು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮೂಲಕ ಮುಂದಾಗಿದೆ ಎಂದು ತಿಳಿದು ಬದಿದ್ದು, ಬಡವರ ಬಿಪಿಎಲ್ ಕಾರ್ಡ್ ರದ್ದುಗೊಳಿಸದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

ಅವರು ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಪುತ್ತೂರಿಗೆ ಆಗಮಿಸಿದ್ದ ಅವರು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಲೋಕ ಕಲ್ಯಾಣಾರ್ಥ ಮತ್ತು ಸಾನ್ನಿಧ್ಯ ವೃದ್ಧಿಗಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನ ಯಜ್ಞ ಕಾರ್ಯಕ್ರಮ – vishwanews24

ಉಡುಪಿ ಜಿಲ್ಲೆಯಲ್ಲಿ ಸುಮಾರು 38 ಸಾವಿರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50 ಸಾವಿರ ಬಿಪಿಎಲ್ ಕಾರ್ಡ್‍ಗಳನ್ನು ಅನಧಿ ಕೃತ ಎಂಬ ಹಣೆಪಟ್ಟಿ ಕಟ್ಟಿ ಗುರುತಿಸಲಾಗಿದೆ. ಶ್ರೀಮಂತರಲ್ಲಿ ಬಿಪಿಎಲ್ ಕಾರ್ಡ್‍ಗಳಿದ್ದರೆ ರದ್ದು ಮಾಡುವುದಕ್ಕೆ ನಮ್ಮ ಆಕ್ಷೇಪ ವಿಲ್ಲ. ಆದರೆ ಬಡವರಿಗೆ ಅನ್ಯಾಯ ಆಗಬಾರದು. ಸರಕಾರ ಗೃಹಲಕ್ಷ್ಮೀ ಮೂಲಕ ನೀಡುತ್ತಿರುವ ಮಾಸಿಕ 2 ಸಾವಿರ ರೂ.ಗಳನ್ನು ಬಿಪಿಎಲ್ ಕಾರ್ಡ್‍ದಾರರಿಗೆ ಮಾತ್ರ ಸೀಮಿತಗೊಳಿಸಬೇಕೆಂಬ ಚರ್ಚೆ ನಡೆಯುತ್ತಿರುವ ಹೊತ್ತಲ್ಲಿ ಈ ರೀತಿ 12 ಲಕ್ಷ ಬಿಪಿಎಲ್ ಕಾರ್ಡ್‍ಗಳನ್ನು ರದ್ದು ಮಾಡಿದರೆ ಗೃಹಲಕ್ಷ್ಮೀಯ ಹಣ ಒಂದಷ್ಟು ಉಳಿತಾಯ ಮಾಡಬಹುದು ಎಂಬ ಲೆಕ್ಕಾಚಾರ ಸರಾರದಲ್ಲಿದೆಯೇ ಎಂಬ ಗುಮಾನಿ ಇದೆ.

1993ರ ಅವಧಿಯಲ್ಲಿ ಗ್ರಾಪಂಗಳು ಅಸ್ತಿತ್ವಕ್ಕೆ ಬಂದಾಗ ಗ್ರಾಪಂ ಸದಸ್ಯರಿಗೆ 20 ರೂ. ಸಿಟ್ಟಿಂಗ್ ಫೀಸ್ ನೀಡಲಾಗುತ್ತಿತ್ತು. ಅದು ನಿಧಾನವಾಗಿ ಏರುತ್ತಾ ಬಂದಿದ್ದು, 2008ರಲ್ಲಿ ಬಿ.ಎಸ್. ಯಡಿಯೂರಪ್ಪ ಸರಕಾರ 27 ಕೋಟಿ ಗೌರವ ಧನ ಬಿಡು ಗಡೆ ಮಾಡಿತ್ತು. 2021ರಲ್ಲಿ ನಾನು ವಿಧಾನ ಪರಿಷತ್ ಸದಸ್ಯನಾಗಿ ಮರು ಆಯ್ಕೆಯಾದ ಬಳಿಕ ಸರಕಾರದ ಗಮನ ಸೆಳೆದು ಗ್ರಾಪಂ ಸದಸ್ಯರ ಗೌರವ ಧನ 1ರಿಂದ 2 ಸಾವಿರ, ಉಪಾಧ್ಯಕ್ಷರಿಗೆ 2 ಸಾವಿರದಿಂದ 4 ಸಾವಿರ, ಅಧ್ಯಕ್ಷರಿಗೆ 3ರಿಂದ 6 ಸಾವಿರಕ್ಕೆ ಏರಿಸಲಾಯಿತು. ನಾವು ನಿರಂತರವಾಗಿ ಪಂಚಾಯಿತಿ ರಾಜ್ ವ್ಯವಸ್ಥೆ ಬಲಪಡಿಸಲು ಯತ್ನಿಸುತ್ತಿ ದ್ದೇವೆ. ಆದರೆ ಕಾಂಗ್ರೆಸ್ ಸರಕಾರಕ್ಕೆ ಇದರಲ್ಲಿ ಆಸಕ್ತಿಯಿಲ್ಲ. ಅದು ಪಂಚಾಯತ್‍ರಾಜ್ ವ್ಯವಸ್ಥೆಯ ಬುಡವನ್ನೇ ಅಲ್ಲಾಡಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಮಂಗಳೂರು: ಗುಳಿಗ ಕೊರಗಜ್ಜ ಉದ್ಬವ ಶಿಲೆ ಆದಿಸ್ಥಳಕ್ಕೆ ಭೇಟಿ ನೀಡಿದ ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ – vishwanews24

 

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ಕೋಡಿಬೈಲು, ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್, ಪುತ್ತೂರು ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾದ ನಿತೀಶ್ ಕುಮಾರ್ ಶಾಂತಿವನ, ಸಂತೋಷ್ ರೈ ಉಪಸ್ಥಿತರಿದ್ದರು

Leave a Reply