ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷರಾಗಿ ಅಣ್ಣಾಮಲೈ ಅವರ ಆಯ್ಕೆ ಸಮರ್ಥವಾಗಿದೆ : ಕುಯಿಲಾಡಿ ಸುರೇಶ್ ನಾಯಕ್ -Vishwanews24
ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷರಾಗಿ ಅಣ್ಣಾಮಲೈ ಅವರ ಆಯ್ಕೆ ಸಮರ್ಥವಾಗಿದೆ : ಕುಯಿಲಾಡಿ ಸುರೇಶ್ ನಾಯಕ್ -Vishwanews24
ಬಿಜೆಪಿಯ ತಮಿಳುನಾಡು ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಐಪಿಎಸ್ ಅಧಿಕಾರಿ ಶ್ರೀ ಕೆ. ಅಣ್ಣಾಮಲೈ ಅವರ ನೇಮಕವನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್ ಅವರು ಸ್ವಾಗತಿಸಿದ್ದಾರೆ.
ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿ ದಕ್ಷ ಸೇವೆ ಸಲ್ಲಿಸಿದ ರಾಜ್ಯ ಕಂಡ ಪ್ರಾಮಾಣಿಕ ಅಧಿಕಾರಿ ಶ್ರೀ ಅಣ್ಣಾಮಲೈ ಅವರು ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ವಿಷಯ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ ಅವರು ಈ ನೇಮಕ ಮಾಡಿದ್ದು, ಶ್ರೀ ಅಣ್ಣಾಮಲೈ ಅವರ ನೇತೃತ್ವದಲ್ಲಿ ಪಕ್ಷವು ತಮಿಳುನಾಡಿನಲ್ಲಿ ಸದೃಢವಾಗಿ ಬೆಳೆಯಲಿದೆ; ಪಕ್ಷವನ್ನು ರಾಜ್ಯದೆಲ್ಲೆಡೆ ದೃಢಗೊಳಿಸುವಲ್ಲಿ ಅವರು ಯಶಸ್ವಿಯಾಗಲಿದ್ದಾರೆ ಎಂಬ ವಿಶ್ವಾಸವನ್ನು ಕುಯಿಲಾಡಿ ಅವರು ವ್ಯಕ್ತಪಡಿಸಿದ್ದಾರೆ.
