ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿಯಿಂದ ತನ್ನನ್ನು ಬಿಡುಗಡೆಗೊಳಿಸುವಂತೆ ಪಕ್ಷದ ಹಿರಿಯರಿಗೆ ಸುನಿಲ್‌ ಕುಮಾರ್‌ ಮನವಿ ..! vishwanews24

Featured, ರಾಜ್ಯ ನ್ಯೂಸ್

ಬಿಜೆಪಿ  ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿಯಿಂದ ತನ್ನನ್ನು ಬಿಡುಗಡೆಗೊಳಿಸುವಂತೆ ಪಕ್ಷದ ಹಿರಿಯರಿಗೆ ಸುನಿಲ್‌ ಕುಮಾರ್‌ ಮನವಿ ..!

ಬೆಂಗಳೂರು: ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆಗೆ ಸರ್ಕಸ್‌ ನಡೆಯುತ್ತಿರುವುದರ ಮಧ್ಯೆಯೇ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಜವಾಬ್ದಾರಿಯಿಂದ ತನ್ನನ್ನು ಬಿಡುಗಡೆಗೊಳಿಸುವಂತೆ ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ಪಕ್ಷದ ಹಿರಿಯರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಕೆಲವು ದಿನಗಳ ಹಿಂದೆಯೇ ಅವರು ಪಕ್ಷದ ಪ್ರಮುಖರು ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಲ್ಲಿ ಮೌಖಿಕವಾಗಿ ಕೋರಿಕೊಂಡಿದ್ದರು ಎನ್ನಲಾಗುತ್ತಿದೆ. ಸುನಿಲ್‌ ಅವರ ಈ ವಿಮುಖತೆಗೆ ಬಣ ರಾಜಕಾರಣ ಕಾರಣವಲ್ಲ, ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಸಂಘಟನಾತ್ಮಕವಾಗಿ ತೊಡಗಿಕೊಳ್ಳುವುದು ಕಷ್ಟವಾಗುತ್ತಿರುವುದರಿಂದ ಈ ನಿರ್ಣಯಕ್ಕೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಸೇವೆ ಸಲ್ಲಿಸಿದ ಛಲವಾದಿ ನಾರಾಯಣಸ್ವಾಮಿ  – vishwanews24

ಬಿಜೆಪಿಯಲ್ಲಿ ಪ್ರಧಾನ ಕಾರ್ಯದರ್ಶಿ ಹುದ್ದೆ ಆಯಕಟ್ಟಿನದು. ಸಾಮಾನ್ಯವಾಗಿ ನಾಲ್ವರು ಪ್ರಮುಖರನ್ನು ಮಾತ್ರ ಈ ಹುದ್ದೆಗೆ ನಿಯೋಜನೆ ಮಾಡಲಾಗುತ್ತದೆ. ಸುನಿಲ್‌ ಕುಮಾರ್‌, ನಂದೀಶ್‌ ರೆಡ್ಡಿ, ಪ್ರೀತಮ್‌ ಗೌಡ ಹಾಗೂ ಪಿ. ರಾಜೀವ್‌ ಸದ್ಯ ಈ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಸಂಘಟನಾತ್ಮಕ ಹಿನ್ನೆಲೆಯಿಂದ ಬಂದ ಸುನಿಲ್‌ ಹಾಗೂ ವಿಜಯೇಂದ್ರ ನಡುವೆ “ವಿರಸವೂ ಅಲ್ಲದ, ಸಮರಸವೂ ಅಲ್ಲದ’ ತಟಸ್ಥ ಸಂಬಂಧವಿದೆ. ಆದಾಗಿಯೂ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ಮನವಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಕೋರಿಕೆಯನ್ನು ಪಕ್ಷ ಪರಿಗಣಿಸಿದೆಯೋ ಇಲ್ಲವೋ? ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ : ಕಳಸ ಪಿಎಸ್ಐ ನಿತ್ಯಾನಂದ ಗೌಡ ಅಮಾನತು – vishwanews24

Leave a Reply