ಬಿಟ್ ಕಾಯಿನ್ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ; ದಿಟ್ಟತನದಿಂದ ನಿಮ್ಮ ಕೆಲಸ ಮಾಡಿ; ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ – Vishwanews24

Featured, ರಾಷ್ಟ್ರ ನ್ಯೂಸ್

ಬಿಟ್ ಕಾಯಿನ್ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ; ದಿಟ್ಟತನದಿಂದ ನಿಮ್ಮ ಕೆಲಸ ಮಾಡಿ; ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ – Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನ ನೀಡಿದ್ದೇನೆ. ಆದರೆ ಬಿಟ್ ಕಾಯಿನ್ ಹಗರಣದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಜೊತೆ ಯಾವುದೇ ಚರ್ಚೆ ಆಗಿಲ್ಲ. ನಾನೇ ಬಿಟ್ ಕಾಯಿನ್ ವಿಚಾರವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದೆ. ಆದರೆ ಬಿಟ್ ಕಾಯಿನ್ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ, ದಿಟ್ಟತನದಿಂದ ನಿಮ್ಮ ಕೆಲಸವನ್ನು ಮುಂದುವರೆಸಿ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದರು.

ನಾವು ನೂರು ದಿನದಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದೆವು. ಡಿಸೆಂಬರ್ ನಲ್ಲಿ ಬೆಂಗಳೂರಿಗೆ ಬರುವಂತೆ ಆಹ್ವಾನಿಸಿದ್ದೇನೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನಿಸಲಾಗಿದೆ ಎಂದು ಹೇಳಿದರು.

ತಮಿಳುನಾಡಿನಲ್ಲಿ ಮಳೆಯ ಆರ್ಭಟ : 20 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – Vishwanews24