ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ
ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಎಚ್ಚರಿಸಿದ್ದಾರೆ.
ಈ ಯೋಜನೆಯ ವಿರುದ್ಧ ನಗರದಲ್ಲಿ ಇಂದು ಬಿಜೆಪಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈಗಾಗಲೇ ರಾಜ್ಯದ ರೈತರು ಬರಗಾಲದಿಂದ ಪರಿತಪಿಸುವ ಸ್ಥಿತಿ ಇದೆ. ಇನ್ನೊಂದೆಡೆ ಹೈನುಗಾರಿಕೆ, ರೇಷ್ಮೆ, ಮಾವು, ರಾಗಿಗೆ ಹೆಸರಾದ ಬಿಡದಿ ಪ್ರದೇಶವನ್ನು ಕಿತ್ತುಕೊಳ್ಳಲು ಸರಕಾರ ಹೊರಟಿದೆ. ಇದರ ವಿರುದ್ಧವಾಗಿ ನಾವಿದ್ದೇವೆ ಎಂದು ತಿಳಿಸಿದರು.
ಈ ಯೋಜನೆಗೆ ಅವಕಾಶ ಕೊಡುವುದಿಲ್ಲ ಎಂದರು. ಇದು ಲ್ಯಾಂಡ್ ಮಾಫಿಯ ಸರಕಾರ ಎಂದು ಟೀಕಿಸಿದರು. ಈ ಸರಕಾರ ಇಡೀ ಬೆಂಗಳೂರನ್ನು ಕಿತ್ತುಕೊಳ್ಳಲು ಮುಂದಾದೀತು ಎಂದು ತಿಳಿಸಿದರು. ಇದರ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದರು.
