‘ಬಿಪಿಎಲ್ ಪಡಿತರ ಚೀಟಿ’ ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ : ಸಚಿವ ಕೆ.ಎಚ್.ಮುನಿಯಪ್ಪ – vishwanews24
BPL ಕಾರ್ಡ್ ಕುರಿತು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಆದಾಯ ಮಿತಿ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ : ಸಚಿವ ಕೆ.ಎಚ್.ಮುನಿಯಪ್ಪ
ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಪಡಿತರ ಚೀಟಿ ಪಡೆಯಲು ನಿಗದಿಪಡಿಸಿರುವ 1.20ಲಕ್ಷ ರೂ.ವಾರ್ಷಿಕ ಆದಾಯದ ಮಿತಿಯನ್ನು ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸಿನಂತೆ 3 ಲಕ್ಷ ರೂ.ಗಳಿಗೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ನಗರದ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಜೊತೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಇದನ್ನೂ ಓದಿ :
ಮಂಗಳೂರು:ಕೇಂದ್ರ ಸರಕಾರದ ವೈಫಲ್ಯದಿಂದ ವಿದ್ಯಾರ್ಥಿಗಳು ಬೀದಿಗೆ: ಪದ್ಮರಾಜ್ – vishwanews24
ಕೇಂದ್ರ ಸರಕಾರದ ಮಾನದಂಡಗಳ ಅನ್ವಯ ಪಡಿತರ ಚೀಟಿಗಳ ಪರಿಶೀಲನೆ ನಡೆಯುತ್ತಿದ್ದು, ನಾವು ಯಾವ ಪಡಿತರ ಚೀಟಿಯನ್ನು ರದ್ದು ಮಾಡುವುದಿಲ್ಲ. ಬಿಪಿಎಲ್ಗೆ ಅನರ್ಹವಾಗಿರುವ ಪಡಿತರ ಚೀಟಿಗಳನ್ನು ಎಪಿಎಲ್ಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಮುನಿಯಪ್ಪ ಹೇಳಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅನ್ನಭಾಗ್ಯ ಯೋಜನೆಯ ಮೂಲಕ ರಾಜ್ಯದ ಸುಮಾರು 4.42 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕೆಜಿ ಪಡಿತರ ವಿತರಣೆ ಮಾಡುತ್ತಿದೆ. ಇದರ ಮೂಲಕ ನಮ್ಮ ಸರಕಾರವು ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ :
ಬೆಳ್ತಂಗಡಿ: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ; ಅದೃಷ್ಟವಶಾತ್ ಸವಾರ ಅಪಾಯದಿಂದ ಪಾರು – vishwanews24
ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯೂ ಪ್ರಮುಖವಾಗಿದೆ. ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಅಂದಿನ ನಮ್ಮ ಯುಪಿಎ ಸರಕಾರ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೊಳಿಸಿದ್ದರಿಂದ, ಈ ಮಹತ್ವದ ಯೋಜನೆ ಅನುಷ್ಠಾನವಾಗಿದೆ ಎಂದು ಮುನಿಯಪ್ಪ ತಿಳಿಸಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆಯ ಮೂಲಕ ತೂಕ ಮತ್ತು ಅಳತೆಯಲ್ಲಿ ತಪಾಸಣೆ ಮಾಡಲು ಸುಮಾರು 33 ವಾಹನಗಳನ್ನು ಇಲಾಖೆಗೆ ಹಂಚಿಕೆ ಮಾಡಿದ್ದು ಇಲ್ಲಿಯವರೆಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯು ಕಳೆದ ಮೂರು ವರ್ಷದಲ್ಲಿ ಸುಮಾರು 250 ಕೋಟಿರೂ.ಗಳ ರಾಜಸ್ವ ಸಂಗ್ರಹ ಮಾಡಿದ್ದು ಗ್ರಾಹಕರಿಗೆ ತೂಕದಲ್ಲಿ ಯಾವುದೆ ವ್ಯತ್ಯಾಸಗಳು ಕಾಣದಂತೆ ಕ್ರಮ ವಹಿಸುತ್ತಿದೆ ಎಂದು ಅವರು ತಿಳಿಸಿದರು
ಇದನ್ನೂ ಓದಿ :
ಅನುಮತಿ ಇಲ್ಲದೆ ನ್ಯಾಯಾಲಯದ ಕಲಾಪಗಳ ಆಡಿಯೋ-ವಿಡಿಯೊ ಹಂಚಿಕೆಗೆ ಸುಪ್ರೀಂ ಕೋರ್ಟ್ ನಿರ್ಬಂಧ – vishwanews24
ಪಡಿತರ ವಿತರಣೆಯಲ್ಲಿ ಕಾಳಸಂತೆಯನ್ನು ತಡೆಯಲು ಕ್ರಮ ವಹಿಸಲಾಗಿದ್ದು, ಗೋದಾಮುಗಳಿಗೆ ಸಿಸಿ ಕ್ಯಾಮರಾ ಹಾಗೂ ಪಡಿತರ ವಾಹನಗಳಿಗೆ ಅಳವಡಿಸಿರುವ ಜಿಪಿಎಸ್ ಕುರಿತು ನಿಗಾವಹಿಸಲು ಕಮಾಂಡ್ ಕಂಟ್ರೋಲ್ ರೂಂ ಅನ್ನು ಕೇಂದ್ರ ಕಚೇರಿಯಲ್ಲಿ ನಿರ್ಮಿಸಲಾಗುತ್ತಿದೆ ಎಂದು ಮುನಿಯಪ್ಪ ಹೇಳಿದರು.
ಎಂಎಸ್ಪಿ ಯೋಜನೆಯಡಿ 5.60 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿಸಿದ್ದು ಅದನ್ನು ಶುದ್ದೀಕರಿಸಿ ಗ್ರಾಹಕರಿಗೆ ವಿತರಣೆ ಮಾಡಲಾಗುತ್ತಿದೆ. ಇಂದಿರಾ ಕಿಟ್ ನೀಡಲು ಟೆಂಡರ್ ಪ್ರಕ್ರಿಯೆಯು ನಡೆಯುತ್ತಿದ್ದು ಅಂತಿಮ ಹಂತದಲ್ಲಿ ಇದೆ. ಮುಂದಿನ ಎರಡು ತಿಂಗಳಲ್ಲಿ ಕಿಟ್ ವಿತರಣೆಗೆ ಕಾರ್ಯರೂಪಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.
