ಬಿ.ಎಸ್ ಯಡಿಯೂರಪ್ಪ ಅವರ ಸಾಮಾಜಿಕ ನ್ಯಾಯ, ರಾಜ್ಯದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ : ಪ್ರಧಾನಿ ಮೋದಿ -Vishwanews24
ಬಿ.ಎಸ್ ಯಡಿಯೂರಪ್ಪ ಅವರ ಸಾಮಾಜಿಕ ನ್ಯಾಯ, ರಾಜ್ಯದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ : ಪ್ರಧಾನಿ ಮೋದಿ -Vishwanews24
ಹೊಸದಿಲ್ಲಿ: ತಮ್ಮ ಅಧಿಕಾರಾವಧಿ ಪೂರ್ಣಗೊಳ್ಳಲು ಎರಡು ವರ್ಷಗಳು ಬಾಕಿಯಿರುವಂತೆಯೇ ಅಧಿಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಅವರು ಸಾಮಾಜಿಕ ನ್ಯಾಯ, ರಾಜ್ಯದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ ಎಂದು ಪ್ರಶಂಸಿಸಿದ್ದಾರೆ.
‘ಬಿಎಸ್ವೈಗೆ ಪಕ್ಷದ ಮೇಲಿನ ಬದ್ಧತೆ ಅವರ್ಣನೀಯ. ಸಾಮಾಜಿಕ ನ್ಯಾಯ, ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ. ಪಕ್ಷ ಮತ್ತು ರಾಜ್ಯದ ಅಭಿವೃದ್ಧಿಗೆ ಅವರ ಕೊಡುಗೆ ಬಣ್ಣಿಸಲು ಶಬ್ದಗಳಿಲ್ಲ. ದಶಕಗಳ ಕಾಲ ರಾಜ್ಯಾದ್ಯಂತ ಸಂಚರಿಸಿ ಪಕ್ಷವನ್ನ ಕಟ್ಟಿದರು. ಯಡಿಯೂರಪ್ಪ ಪಕ್ಷ ಕಟ್ಟಿದ್ದು ಸ್ಮರಣೀಯ ಕೊಡುಗೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ
No words will ever do justice to the monumental contribution of Shri @BSYBJP Ji towards our Party and for Karnataka’s growth. For decades, he toiled hard, travelled across all parts of Karnataka and struck a chord with people. He is admired for his commitment to social welfare.
— Narendra Modi (@narendramodi) July 28, 2021
.
