ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಶೋಭಾ ಕರಂದ್ಲಾಜೆ ಅವರು, ಮೈಸೂರು ಬ್ಯಾಂಕ್ ವೃತ್ತರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ಜೊತೆಗೆ ರೋಡ್ ಶೋ ಕೂಡಾ ನಡೆಸಿದರು. ಈ ವೇಳೆ ಕೆ.ಗೋಪಾಲಯ್ಯ , ದಾಸರಹಳ್ಳಿ ಶಾಸಕರಾದ ಎಸ್. ಮುನಿರಾಜು , ಕೆ.ಆರ್.ಪುರಂ ಶಾಸಕರಾದ ಭೈರತಿ ಬಸವರಾಜು, ವಿಧಾನಪರಿಷತ್‌ ಸದಸ್ಯರಾದ ಗೋಪಿನಾಥ್ ರೆಡ್ಡಿ, ಭಾರತೀ ಶೆಟ್ಟಿ, ಚಲವಾದಿ ನಾರಾಯಣ ಸ್ವಾಮಿಯವರು, ಕಟ್ಟಾ ಜಗದೀಶ್ ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆ: ದ.ಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿ ನಾಮಪತ್ರ ಸಲ್ಲಿಕೆ – Vishwanews24

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಕ್ಷೇತ್ರದ ಅಭಿವೃದ್ದಿಗೆ ನಿಮ್ಮ ಜೊತೆ ಇರುತ್ತೇನೆ. ಬರುವ ಐದು ವರ್ಷಗಳಲ್ಲಿ ಬೆಂಗಳೂರು ಉತ್ತರವನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇನೆ ಎಂದರು. ಮೊದಲ ಬಾರಿ ನರೇಂದ್ರ ಮೋದಿ ನೇತೃತ್ವ ಒಪ್ಪಿ ಮಾಜಿ ಪ್ರಧಾನಿ ಎಚ್‌ಡಿ ದೇವೆಗೌಡರು ನಮ್ಮ ಜೊತೆಗೆ ಸೇರಿದ್ದಾರೆ. ನಮ್ಮಿಬ್ಬರ ಒಗ್ಗಟ್ಟು ಕಾಂಗ್ರೆಸ್‌ಗೆ ಪಾಠ ಕಳಿಸಲು ಶಕ್ತಿ ಬಂದಿದೆ ಎಂದರು.

ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲಬೇಕು. ಕಾರ್ಯಕರ್ತರಲ್ಲಿ ಉತ್ಸಾಹದಲ್ಲಿದೆ. ಕರ್ನಾಟಕದಲ್ಲಿ 28 ಕ್ಕೆ 28 ಕ್ಷೇತ್ರಗಳನ್ನು ಬಿಜೆಪಿ ಹಾಗೂ ಜೆಡಿಎಸ್ ಗೆಲ್ಲಲಿದೆ. ಬಿಜೆಪಿ ಹಾಗೂ ಜೆಡಿಎಸ್ ಹಾಲು ಸಕ್ಕರೆಯಂತೆ ಬೆರೆತು ಕೆಲಸ ಮಾಡಿದರೆ 28 ಕ್ಷೇತ್ರದಲ್ಲಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬೆಂಬಲ ನೀಡುತ್ತೇನೆ : ಸುಮಲತಾ ಅಂಬರೀಶ್‌  – Vishwanews24

Leave a Reply