ಬೆಂಗಳೂರು : ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್‌ಡೌನ್ ಘೋಷಣೆ..Vishwanews24

Featured, ಜ್ಯೋತಿಷ್ಯ, ರಾಜ್ಯ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್‌ಡೌನ್ ಘೋಷಣೆ..Vishwanews24

ಅಗತ್ಯ ಸೇವೆ ಬಿಟ್ಟು ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾಫ್ ಲಾಕ್‌ಡೌನ್ ಘೋಷಣೆಯಾಗಿದೆ. ಅಗತ್ಯ ಸೇವೆ ಬಿಟ್ಟು
ಉಳಿದ ಎಲ್ಲ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ಇಂದು ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಶುಕ್ರವಾರ ರಾತ್ರಿ 9 ಗಂಟೆಯವರೆಗೆ ಯಾವೆಲ್ಲ ಅಂಗಡಿಗಳು
ತೆರೆದಿರಬೇಕು ಎಂಬುದರ ಬಗ್ಗೆ ಮತ್ತೊಂದು ಮಾರ್ಗಸೂಚಿಯನ್ನು ಹೊರಡಿಸಿದೆ.

ಮಂಗಳೂರು : ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವೆಚ್ಚವನ್ನು ಮಹಾನಗರ ಪಾಲಿಕೆ ಭರಿಸಲಿದೆ: ವೇದವ್ಯಾಸ ಕಾಮತ್ -Vishwanews24

ಹೊಸ ಆದೇಶ ಮೇ 4ರವರೆಗೆ ಜಾರಿಯಲ್ಲಿರಲಿದೆ. ಯಾರಿಗೆಲ್ಲ ಅನುಮತಿ?

1) ದಿನಸಿ, ಹಣ್ಣು, ತರಕಾರಿ ಡೈರಿ, ಮಾಂಸ, ಔಷಧಿ, ಪ್ರಾಣಿಗಳ ಆಹಾರದ ಅಂಗಡಿಗೆ ಅನುಮತಿ
2) ಹೋಲ್ ಸೇಲ್ ತರಕಾರಿ, ಹಣ್ಣು ಹೂವು ಅಂಗಡಿ ತೆರೆಯಬಹುದು
3) ಹೊಟೇಲ್, ರೆಸ್ಟೋರೆಂಟ್ ಗಳಲ್ಲಿ ವಾರ್ಸಲ್‌ಗಳಿಗೆ ಮಾತ್ರ ಅವಕಾಶ
4) ಹೊಟೇಲ್, ಲಾಡ್ಡಿಂಗ್ ಹೊರಗಿನಿಂದ ಬಂದ ಅತಿಥಿಗಳಿಗೆ ಮಾತ್ರ ಅನುಮತಿ
5) ಮದ್ಯ ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ
6) ಬ್ಯಾಂಕ್, ಎಟಿಎಂ ಇನ್ನರೆನ್ಸ್ ಕಂಪನಿಗಳಿಗೆ ತೆರೆಯಲು ಅವಕಾಶ
7) ಪೇಪರ್, ಟಿವಿ, ಮೀಡಿಯಾ ಕಂಪನಿಗಳಿಗೆ ತೆರೆಯಲು ಅವಕಾಶವಿದೆ
8) ಇ-ಕಾಮರ್ಸ್ ಸೇವೆಯ ಕಚೇರಿಗಳಿಗೆ ತರೆಯಬಹುದು
9) ಶೇರ್ ಮಾರ್ಕೇಟ್ ನಡೆಸುವ ಸೇವಾ ಕಚೇರಿ, ಕೋಲ್ಡ್ ಸ್ಟೋರೆಜ್, ವೇರ್ ಹೌಸ್ ಗಳ ತೆರೆಯಲು ಅನುಮತಿ
10) ಖಾಸಗಿ ಸೆಕ್ಯೂರಿಟಿ ಏಜೆನ್ಸಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ತೆರೆಯಲು ಅವಕಾಶ
11) ಕಟ್ಟಡ ನಿರ್ಮಾಣ ಸಾಮಾಗ್ರಿ ಮಾರಾಟ ಮಾಡುವ ಅಂಗಡಿಗೆ ಅವಕಾಶ

ಈ ಮೇಲಿನ ಬಿಟ್ಟು ಉಳಿದ ಎಲ್ಲ ಅಂಗಡಿಗಳು ಮುಚ್ಚುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕೊರೊನಾ ಎರಡನೇ ಅಲೆ : ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ -Vishwanews24