ಬೆಂಗಳೂರು: ನಿಂತಿದ್ದ BMTC ಬಸ್ಸಿನಲ್ಲಿ ಬೆಂಕಿ : ಕಂಡಕ್ಟರ್ ಸಜೀವ ದಹನ – Vishwanews24
ಬೆಂಗಳೂರು: ನಿಂತಿದ್ದ BMTC ಬಸ್ಸಿನಲ್ಲಿ ಬೆಂಕಿ : ಕಂಡಕ್ಟರ್ ಸಜೀವ ದಹನ
ಬೆಂಗಳೂರು: ನಿಂತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ನಿರ್ವಾಹಕ ಸಜೀವ ದಹನವಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಮುತ್ತಯ್ಯ ಸ್ವಾಮಿ (45) ಎಂದು ಗುರುತಿಸಲಾಗಿದೆ. ಬಸ್ ಡಿಪೋ 31ಕ್ಕೆ ಸೇರಿದ್ದಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.
ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ನಿಲ್ದಾಣ ದಲ್ಲಿ ಚಾಲಕ ಹಾಗೂ ನಿರ್ವಾಹಕ ಬಸ್ನಲ್ಲಿ ಮಲಗಿದ್ದರು. ಮುತ್ತಯ್ಯ ಸ್ವಾಮಿ ಅವರು ಬಸ್ಸಿನ ಸಿಟ್ನಲ್ಲಿಯೇ ಮಲಗಿದ್ದರು. ಈ ವೇಳೆ ಬಸ್ಸಿಗೆ ದಿಢೀರ್ ಬೆಂಕಿ ಹೊತ್ತಿಕೊಂಡಿದ್ದು, ಮುತ್ತಯ್ಯ ಅವರು ಮಲಗಿದ್ದಲ್ಲೇ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ. ಇತ್ತ ಮುಂಜಾನೆ ಚಾಲಕ ಎದ್ದು ಶೌಚಕ್ಕೆ ಹೋದ ವೇಳೆ ಘಟನೆ ಬೆಳಕಿಗೆ ಬಂದಿದೆ.

ಗದಗ ಜಿಲ್ಲೆಯ ಹಾಲೂರ ಗ್ರಾಮದ ಮುತ್ತಯ್ಯ ಸ್ವಾಮಿ, ಕಳೆದ ಹಲವು ವರ್ಷಗಳಿಂದ ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಬಿಎಂಟಿಸಿಯ 31 ರ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
