ಬೆಳಪು ಗ್ರಾಮಾಭಿವೃದ್ಧಿ ರಾಜ್ಯಕ್ಕೆ ಮಾದರಿ, ಜಿಲ್ಲಾಧಿಕಾರಿ ಕೂರ್ಮರಾವ್ : vishwanews24

Featured, ಉಡುಪಿ

ಬೆಳಪು ಗ್ರಾಮಾಭಿವೃದ್ಧಿ ರಾಜ್ಯಕ್ಕೆ ಮಾದರಿ, ಜಿಲ್ಲಾಧಿಕಾರಿ ಕೂರ್ಮರಾವ್

ಕಾಪು : ಸರಕಾರಿ ಸಂಯುಕ್ತ ಪ್ರೌಢಶಾಲೆ ಬೆಳಪು ಇಲ್ಲಿನ ಶಾಲಾ ಪ್ರಾರಂಭೋತ್ಸವಕ್ಕೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಮಾನ್ಯ ಕೂರ್ಮಾರಾವ್ ಐ. ಎ. ಎಸ್ ರವರು ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬೆಳಪು ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್, ಕೈಗಾರಿಕಾ ಪಾರ್ಕ್, ಹಾಗೂ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಬೆಳಪು ಗ್ರಾಮದ ಅಭಿವೃದ್ಧಿ ರಾಜ್ಯಕ್ಕೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳಪು ಗ್ರಾಮ ಅಭಿವೃದ್ಧಿಯ ರೂವಾರಿ ಡಾ. ದೇವಿಪ್ರಸಾದ್ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply