ಬೆಳ್ತಂಗಡಿ: ಅಕ್ರಮ ಕಸಾಯಿ ಖಾನೆಗೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು – ಆರೋಪಿಗಳ ವಿರುದ್ಧ ಪೋಲೀಸ್ ಠಾಣೆಗೆ ದೂರು – Vishwanews24
ಬೆಳ್ತಂಗಡಿ: ಅಕ್ರಮ ಕಸಾಯಿ ಖಾನೆಗೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು ..
ಅಕ್ರಮ ಕಾಸಾಯಿ ಖಾನೆ ನಡೆಸುವುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ..
ಬೆಳ್ತಂಗಡಿ: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು, ಪೋಲೀಸರು ಆಗಮಿಸಿ ಕೇಸು ದಾಖಲಿಸಿದ್ದಾರೆ.
ಕ್ರಮ ಕಾವಿಶ್ವ ಹಿಂದು ಪರಿಷತ್ ವೇಣೂರು ಪ್ರಖಂಡದ ಕಾರ್ಯಕರ್ತರಿಂದ ಪೋಲೀಸರಿಗೆ ಮನವಿ ಕೂಡ ಕೊಡಲಾಯಿತು.ಕಸಾಯಿ ಖಾನೆ ನಡೆಸುವುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಮರೋಡಿ ಗ್ರಾಮದ ಅಜೀದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಗೋಮಾಂಸವನ್ನು ಮಾಡುತ್ತಿರುವುದು ಸಂಘಟನೆಯ ಗಮನಕ್ಕೆ ಬಂದಿದ್ದು ಕೂಡಲೇ ಪೋಲೀಸ್ ಠಾಣೆಗೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು:ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ ಹೃದಯಾಘಾತದಿಂದ ನಿಧನ – Vishwanews24
ತಾಲೂಕಿನ ಕೆಲವಡೆ ನಡೆಯುವ ಅಕ್ರಮ ಕಾಸಾಯಿಖಾನೆ ನಡೆಸುವುವವರನ್ನು ಪತ್ತೆ ಹಚ್ಚಿ ಅವರ ಆವರಣವನ್ನು ಮುಟ್ಟುಗೋಲು ಹಾಕಬೇಕು.
ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವೇಣೂರು ಪೋಲೀಸ್ ಠಾಣೆಗೆ ವಿಶ್ವ ಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡ ಮನವಿಯಲ್ಲಿ ಆಗ್ರಹಿಸಿದ್ದಾರೆ.
