ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ
ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಜು. 8ರಿಂದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಪ್ರಕಟನೆ ತಿಳಿಸಿದೆ.
ನಿರಂತರ ಮಳೆಯಿಂದಾಗಿ ಗಡಾಯಿಕಲ್ಲು ಚಾರಣ ಮಾರ್ಗಗಳು ಜಾರುವಂತಾಗಿದ್ದು, ಇದರಿಂದ ಚಾರಣಿಗರ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಾರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24
ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಹಾಗೂ ಚಾರಣ ಮಾರ್ಗಗಳ ಸುರಕ್ಷೆ ಪರಿಶೀಲಿಸಿದ ಬಳಿಕ ನಿಷೇಧ ತೆರವುಗೊಳಿಸುವ ಸಾಧ್ಯತೆ ಇದೆ.
ಜೂ. 1ರಂದು ಚಾರಣ ಆರಂಭಗೊಂಡು, ಬಳಿಕ ಕೆಲವು ದಿನಗಳಲ್ಲಿ ನಿರ್ಬಂಧ ವಿಧಿಸಲಾಗಿತ್ತು. ಆ ಬಳಿಕ ಮತ್ತೆ ಜೂ. 25ರಂದು ಮತ್ತೆ ಚಾರಣಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಭಾರೀ ಮಳೆ ಹಿನ್ನೆಲೆ ಮತ್ತೆ ಜು. 8ರಿಂದ ಚಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.
