ಬೆಳ್ತಂಗಡಿ : ಯುವತಿ ಆತ್ಮಹತ್ಯೆ – vishwanews24
ಬೆಳ್ತಂಗಡಿ : ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಸೆ. 9ರಂದು ಸಂಜೆಯ ವೇಳೆ ನಡೆದಿದೆ.
ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಅವರ ಪುತ್ರಿ ಲಿಶ್ಮಿತ ಗೌಡ (20) ಮೃತರು ಎಂದು ಗುರುತಿಸಲಾಗಿದೆ. ಈಕೆ ನಡ ಸರಕಾರಿ ಕಾಲೇಜ್ ನಲ್ಲಿ ಕ್ಲರ್ಕ್ ಆಗಿ ಕೆಲಸಮಾಡುತ್ತಿದ್ದರು. ಅನಾರೋಗ್ಯ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
