ಬೆಳ್ತಂಗಡಿ : PFI ಜಿಲ್ಲಾ ಸಮಿತಿ‌ ಸದಸ್ಯ ಹೈದರ್ ನೀರ್ಸಾಲ್ ಹೃದಯಾಘಾತದಿಂದ ನಿಧನ – Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: PFI ಜಿಲ್ಲಾ ಸಮಿತಿ‌ ಸದಸ್ಯ, ಸಾಮಾಜಿಕ ಮುಂದಾಳು  ಹೈದರ್ ನೀರ್ಸಾಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಜಿಲ್ಲಾ ಸಮಿತಿ ಸದಸ್ಯ, ಸಾಮಾಜಿಕ ಮುಂದಾಳು, ಸಂಘಟಕ ಹೈದರ್ ನೀರ್ಸಾಲ್(55) ಉಜಿರೆ ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಸರಕಾರದ ಸಿಎಸ್‌ಸಿ ಆನ್ಲೈನ್ ಕೇಂದ್ರವನ್ನೂ ನಡೆಸುತ್ತಿದ್ದ ಅವರು ಸಿಎಸ್‌ಸಿ ವಿಎಲ್‌ಇ ಸೊಸೈಟಿ ಬೆಳ್ತಂಗಡಿ ಭಾಗದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ನಿರಂತರ ಕಾರ್ಯತತ್ಪರರಾಗಿಯೇ ಇರುತ್ತಿದ್ದ ಅವರು ಮಂಗಳವಾರ “ಗ್ರಾಮ ಒನ್” ಇದರ ಸಭೆಗಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ‌.

ಕರಾವಳಿಯಲ್ಲಿ ಮಳೆಯ ಅಬ್ಬರ – ಜೂನ್ 25ರವರೆಗೆ ರೆಡ್ ಅಲರ್ಟ್ ಘೋಷಣೆ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ – Vishwanews24

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಜಿ ಅಧ್ಯಕ್ಷರಾಗಿದ್ದ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಶಿರ್ಲಾಲು ಮಸೀದಿ ಗೌರವಾಧ್ಯಕ್ಷರಾಗಿ, ತಾಲೂಕು ಮುಸ್ಲಿಂ‌ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.‌

ಹೈದರ್ ನಿರ್ಸಾಲ್ ಅವರ ಮಯ್ಯತ್ ಇದೀಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದು, 3 ಗಂಟೆಗೆ ಅವರ ಮನೆಗೆ ತಲುಪಲಿದೆ. ಅಲ್ಲಿ ಅಂತಿಮ ವಿಧಿ ಪೂರೈಸಿ ಉಜಿರೆ ಹಳೆಪೇಟೆ ಮಸೀದಿಯ ಹೊರಾಂಗಣದಲ್ಲಿ ಸಾರ್ವಜನಿಕರಿಗೆ ಅಂತಿಮ‌ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುವ್ಯವಸ್ಥೆಯ ದೃಷ್ಟಿಯಿಂದ ಎಲ್ಲರೂ ಅಲ್ಲಿಯೇ ಅಂತಿಮ ದರ್ಶನ ಪಡೆಯುವಂತೆ ಕುಟುಂಬದವರು ವಿನಂತಿಸಿದ್ದಾರೆ.

ಮೃತರು ತಾಯಿ, ಪತ್ಮಿ, ಓರ್ವ ಗಂಡು, ಮೂವರು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನ ; ಸಮಾಜ ಸೇವಕರ ಸಮಯಪ್ರಜ್ಞೆಯಿಂದ ವ್ಯಕ್ತಿಯ ರಕ್ಷಣೆ – Vishwanews24

Leave a Reply