ಬೈಕ್‌ಗೆ ಲಾರಿ ಡಿಕ್ಕಿ :  3 ವರ್ಷದ ಮಗು ಸ್ಥಳದಲ್ಲಿಯೇ ಸಾವು , ತಂದೆ-ತಾಯಿಗೆ ಗಂಭೀರ ಗಾಯ ; ಚಾಲಕ ಪರಾರಿ – vishwanews24

Featured, ರಾಜ್ಯ ನ್ಯೂಸ್

ಬೈಕ್‌ಗೆ ಲಾರಿ ಡಿಕ್ಕಿ :  3 ವರ್ಷದ ಮಗು ಸ್ಥಳದಲ್ಲಿಯೇ  ಸಾವು, ತಂದೆ-ತಾಯಿಗೆ ಗಂಭೀರ ಗಾಯ ; ಚಾಲಕ ಪರಾರಿ 

ದೊಡ್ಡಬಳ್ಳಾಪುರ: ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ  ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲಿಯೇ ಮೃತ ಪಟ್ಟಿದೆ. ಧನ್ವಿತ್ (3) ಮೃತ ದುರ್ದೈವಿ. ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಆಂಜನೇಯ, ಮಮತ ಎಂಬುವವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಾಪುರ ಮೂಲದ ಆಂಜನೇಯ ಕುಟುಂಬ ಸಮೇತ ಬೈಕ್‌ನಲ್ಲಿ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದವರು ಹಾರಿ ರಸ್ತೆ ಬದಿಗೆ ಬಿದ್ದಿದ್ದಾರೆ.

ಬಳ್ಳಾರಿ:  ನೂತನ‌ ಮೇಯರ್ ಆಗಿ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್, ಉಪಮೇಯರ್ ಆಗಿ ಡಿ. ಸುಕುಂ ಆಯ್ಕೆ – vishwanews24

ಬಾಲಕ ಧನ್ವಿತ್‌ ಮೇಲೆ ಲಾರಿ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೂ ಅಪಘಾತ ಮಾಡಿ ಲಾರಿಯನ್ನು ಒಂದು ಕಿಲೋ ಮೀಟರ್ ದೂರದಲ್ಲಿ ನಿಲ್ಲಿಸಿ, ಸ್ಥಳದಿಂದ ಚಾಲಕ ಪರಾರಿ ಆಗಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಚಾಲಕನಿಗಾಗಿ ಹುಡುಕಾಟ ನಡೆದಿದೆ.

ಕೊಲೆ ಮಾಡುವಂತಹ ಬುದ್ಧಿ ದರ್ಶನ್‌ಗೆ ಇಲ್ಲ : ನಟನ ಪರ ಬ್ಯಾಟ್‌ ಬೀಸಿದ ಮದ್ದೂರು ಶಾಸಕ – vishwanews24

Leave a Reply