ಭಟ್ಕಳ : ಮಳೆಯಿಂದ ಮನೆಯ ಮೇಲೆ ಗುಡ್ಡ ಕುಸಿತ ; ಅವಶೇಷಗಳಡಿ ಸಿಲುಕಿದ ನಾಲ್ವರು – Vishwanews24
ಮಳೆಯಿಂದ ಮನೆಯ ಮೇಲೆ ಗುಡ್ಡ ಕುಸಿತ
ನಾಲ್ವರು ವಾಸವಾಗಿದ್ದ ಮನೆ
ಅವಶೇಷಗಳಡಿ ಸಿಲುಕಿದ ನಾಲ್ವರು
ಸ್ಥಳೀಯರಿಂದ ತೆರವು ಕಾರ್ಯಾಚರಣೆ
ಭಟ್ಕಳ: ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಅವಶೇಷಗಳಡಿ ನಾಲ್ವರು ಸಿಲುಕಿಕೊಂಡಿರುವ ಘಟನೆ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ.
ಮನೆಯಲ್ಲಿದ್ದ ನಾರಾಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮಿ ನಾಯ್ಕ (33), ಪುತ್ರ ಅನಂತ ನಾರಾಯಣ ನಾಯ್ಕ (32) ಹಾಗೂ ಸಂಬಂಧಿ ಪ್ರವೀಣ ಬಾಲಕೃಷ್ಣ ನಾಯ್ಕ (20) ಮಣ್ಣಿನಲ್ಲಿ ಸಿಲುಕಿಕೊಂಡಿದ್ದಾರೆ.
ಇನ್ನು ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದಲ್ಲಿ ಚಿರೆಕಲ್ಲು ಮಿಶ್ರಿತ ಮಣ್ಣು ಮನೆಯ ಮೇಲೆ ಕುಸಿದಿದ್ದು, ಮನೆ ಸಂಪೂರ್ಣ ನಾಶವಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.
