ಭಯೋತ್ಪಾದನೆ ಮಟ್ಟಹಾಕಲು ಮೊದಲ ಹಂತದ ಉಗ್ರರ ಪಟ್ಟಿ ಸಿದ್ಧ -Vishwanews24
ನವದೆಹಲಿ: ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಾರ್ಯಾಚರಣೆ ಶುರು ಮಾಡಿರುವ ಅಮಿತ್ ಶಾ ಉಗ್ರರ ಪಟ್ಟಿ ರೆಡಿ ಮಾಡಿಕೊಂಡಿದ್ದಾರೆ.
ಭಯೋತ್ಪಾದನೆ ಮಟ್ಟಹಾಕಲು ಕ್ರಮಕೈಗೊಂಡಿರುವ ಅವರು ಮೊದಲ ಹಂತದಲ್ಲಿ ಉಗ್ರರ ಪಟ್ಟಿ ಸಿದ್ಧಪಡಿಸಿಕೊಂಡು ಜಮ್ಮು-ಕಾಶ್ಮೀರದಿಂದ ಕಾರ್ಯಾಚರಣೆ ಆರಂಭಿಸಿದ್ದಾರೆ. ಪಾಕಿಸ್ತಾನದ ನೆರವಿನೊಂದಿಗೆ ಜಮ್ಮು-ಕಾಶ್ಮೀರದಲ್ಲಿ ಯುವಕರನ್ನು ದಾರಿ ತಪ್ಪಿಸುತ್ತಿರುವ ವಿವಿಧ ಭಯೋತ್ಪಾದಕ ಸಂಘಟನೆಗಳ ಮುಖಂಡರಿಗೆ ಬಿಸಿ ಮುಟ್ಟಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ ಮಲ್ಲಿಕ್ ಅವರೊಂದಿಗೆ ಸಮಾಲೋಚನೆ ನಡೆಸಿ, ಸ್ಥಿತಿಗತಿಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಅಮರನಾಥ ಯಾತ್ರೆ ಭದ್ರತೆ ಬಗ್ಗೆ ಮಾಹಿತಿ ಪಡೆದು ಸೂಚನೆ ನೀಡಿದ್ದಾರೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಗೌಬಾ, ಐಬಿ ಮುಖ್ಯಸ್ಥ ರಾಜೀವ್ ಜೈನ್, ರಾ ನಪ್ರತಿನಿಧಿ ಅನಿಲ್ ದಾಸ್ತಾನ ಸೇರಿದಂತೆ ಹಲವು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ದೇಶದ ಆಂತರಿಕ ಭದ್ರತೆ ಮತ್ತು ಸವಾಲುಗಳ ಕುರಿತಂತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
