ಭಾರತದಲ್ಲಿ ನರೇಂದ್ರ ಮೋದಿ ಅಧಿಕಾರದಲ್ಲಿ ಇರುವವರೆಗೆ ಭಾರತ ಮತ್ತು ಪಾಕಿಸ್ಥಾನ ನಡುವಿನ ಬಾಂಧವ್ಯ ವೃದ್ಧಿಯಾಗಲು ಸಾಧ್ಯವಿಲ್ಲ : ಶಾಹೀದ್ ಅಫ್ರಿದಿ -Vishwanews24
ಇಸ್ಲಮಾಬಾದ್: ಭಾರತದಲ್ಲಿ ನರೇಂದ್ರ ಮೋದಿ ಅಧಿಕಾರದಲ್ಲಿ ಇರುವ ವರೆಗೆ ಭಾರತ ಮತ್ತು ಪಾಕಿಸ್ಥಾನ ನಡುವಿನ ಬಾಂಧವ್ಯ ವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಪಾಕಿಸ್ಥಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ಹೇಳಿಕೆ ನೀಡಿದ್ದಾರೆ.
ಕ್ರಿಕೆಟ್ ಪಾಕಿಸ್ಥಾನಕ್ಕೆ ನೀಡಿದ ಸಂದರ್ಶನದಲ್ಲಿ ಶಾಹೀದ್ ಅಫ್ರಿದಿ ಈ ಮಾತುಗಳನ್ನಾಡಿದ್ದಾರೆ. ಭಾರತೀಯರು ಸೇರಿದಂತೆ ನಾವೆಲ್ಲಾ ಭಾರತದ ಪ್ರಧಾನಿ ಮೋದಿಯವರನ್ನು ಅರ್ಥ ಮಾಡಿಕೊಂಡಿದ್ದೇವೆ. ಅವರು ಋಣಾತ್ಮಕವಾಗಿ ಯೋಚನೆ ಮಾಡುವ ವ್ಯಕ್ತಿ ಎಂದು ಅಫ್ರಿದಿ ಹೇಳಿದ್ದಾರೆ.
ಪಾಕಿಸ್ಥಾನದಲ್ಲಿ ಭಾರತ ತಂಡ ಕ್ರಿಕೆಟ್ ಆಡಬೇಕೆಂಬ ನಮ್ಮ ಮನವಿಗೆ ಭಾರತದಿಂದ ಸಕಾರಾತ್ಮಕ ಉತ್ತರ ಬರುತ್ತದೆ ಎಂದು ನನಗನಿಸುವುದಿಲ್ಲ. ಭಾರತ ಮತ್ತು ಪಾಕಿಸ್ಥಾನದ ನಡುವಿನ ಸಂಬಂಧ ಒಬ್ಬ ವ್ಯಕ್ತಿಯಿಂದ ಹಾಳಾಗಿದೆ ಎಂದ ಅವರು ಉಭಯ ದೇಶಗಳು ಜನರು ಪರಸ್ಪರ ಸಂಚರಿಸಲು ಬಯಸುತ್ತಾರೆ. ಆದರೆ ಮೋದಿ ಏನನ್ನು ಮಾಡಲು ಹೊರಟಿದ್ದಾರೆ ಎಂದು ಅರ್ಥವಾಗುವುದಿಲ್ಲ ಎಂದು ಅಫ್ರಿದಿ ವಾಗ್ದಾಳಿ ನಡೆಸಿದ್ದಾರೆ.
