ಭಾರತೀಯ ಕ್ರಿಕೆಟ್‌ನಲ್ಲಿ ಎಸ್‌ಸಿ ಎಸ್‌ಟಿ ಆಟಗಾರರಿಗೆ ಮೀಸಲಾತಿ ನೀಡಿ : ನಟ ಚೇತನ್ – Vishwanews24

Featured, ರಾಜ್ಯ ನ್ಯೂಸ್

ಭಾರತೀಯ ಕ್ರಿಕೆಟ್‌ನಲ್ಲಿ ಎಸ್‌ಸಿ ಎಸ್‌ಟಿ ಆಟಗಾರರಿಗೆ ಮೀಸಲಾತಿ ನೀಡಿ : ನಟ ಚೇತನ್

ಚಾಮರಾಜನಗರ : ಕಾಂತಾರ ಸಿನಿಮಾದ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ನಟ ಚೇತನ್ ವಿವಾದಕ್ಕೆ ಸಿಲುಕಿದ್ದಾರೆ.

ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿದ ನಟ ಚೇತನ, ಭಾರತೀಯ ಕ್ರಿಕೆಟ್‌ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು ‘ ಎಂದು ಕಿಡಿಕಾರಿದ್ದಾರೆ.

ಬಂಟ್ವಾಳ: ತಲಪಾಡಿಯಲ್ಲಿ ಆಟೋ ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ – Vishwanews24

ಇನ್ನೂ 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ. 4 ಪರ್ಸೆಂಟ್‌ನಿಂದ 12 ಪರ್ಸೆಂಟ್‌ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ. ಅಷ್ಟು ಜನಸಂಖ್ಯೆ ಇದ್ರೆ ಮೀಸಲಾತಿ ಹೆಚ್ಚಳ ತಪ್ಪಿಲ್ಲ ಅಂದಿದ್ದಾರೆ. ಇದೇ ವೇಳೆ, ದಕ್ಷಿಣ ಆಫ್ರಿಕಾ ತಂಡದಲ್ಲಿ 6 ಮಂದಿ ಕರಿಯರಿಗೆ ಮೀಸಲಾತಿ ಇದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ಎಸ್ಸಿ, ಎಸ್ಟಿಗೆ ಮೀಸಲಾತಿ ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತೆ ಅಂತ ಚೇತನ್ ಅಭಿಪ್ರಾಯವನ್ನು ಪಡುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ.

ಬೆಂಗಳೂರು : ಕೇಸರಿ ಶಾಲೆಗಾಗಿ ಹಿಂದೂಪರ ಸಂಘಟನೆಗಳಿಂದ ಅಭಿಯಾನ – Vishwanews24

Leave a Reply