ಭಾರತೀಯ ಸೇನೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ ಗೆ ಗ್ರೀನ್ ಸಿಗ್ನಲ್ – Vishwanews24
ಭಾರತೀಯ ಸೇನೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ ಗೆ ಗ್ರೀನ್ ಸಿಗ್ನಲ್
ನವೆದೆಹಲಿ: ಹೆಚ್ಚು ಹೆಚ್ಚು ಯುವಕರಿಗೆ ಸೇನೆ ಸೇರಲು ಅವಕಾಶ ನೀಡುವ ನಿಟ್ಟಿನಲ್ಲಿ, ಇಂದು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ, ಸಂಪುಟ ಸಮಿತಿಯು ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದು, ರಾಜನಾಥ್ ಸಿಂಗ್ ಉಪಸ್ಥಿತಿಯಲ್ಲಿ ಸೇನೆಯ ಹೊಸ ನೇಮಕಾತಿ ಮಾದರಿ ‘ಅಗ್ನಿಪಥ್’ಗೆ ಸಂಪುಟ ಸಮಿತಿ ಅನುಮೋದಿಸಿದೆ ಎಂದರು.

‘ಅಗ್ನಿಪಥ್’ ನ ಪರಿವರ್ತನಾ ಯೋಜನೆಯನ್ನು ಅನುಮೋದಿಸಲು ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯು ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಇದರ ಅಡಿಯಲ್ಲಿ, ಭಾರತೀಯ ಯುವಕರಿಗೆ ಸಶಸ್ತ್ರ ಸೇವೆಗಳಿಗೆ ಸೇರ್ಪಡೆಗೊಳ್ಳಲು ಅವಕಾಶ ನೀಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
Delhi | The Cabinet Committee on Security has taken a historic decision today to approve the transformative scheme of 'Agnipath'. Under this, Indian youth would be granted an opportunity to get inducted into the Armed services: Defence Minister Rajnath Singh pic.twitter.com/eUv2SyQBPw
— ANI (@ANI) June 14, 2022
ಅಂದಹಾಗೇ ಹೊಸ ಸೇನಾ ನೇಮಕಾತಿ ಅಗ್ನಿಪಥ್ ಅನುಸಾರ, ಭಾರತೀಯ ಸೇನೆಯಲ್ಲಿ ಅಲ್ಪಾವಧಿಯವರೆಗೆ ಯುವಕರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ಸೇನೆ ಸೇರೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಅನ್ನು ಕೇಂದ್ರ ಸರ್ಕಾರ ನೀಡಿದೆ.
ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಾಲಯಕ್ಕೆ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ – Vishwanews24
