ಭಾರತೀಯ ಸೇನೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ ಗೆ ಗ್ರೀನ್ ಸಿಗ್ನಲ್  – Vishwanews24

Featured, ರಾಷ್ಟ್ರ ನ್ಯೂಸ್

ಭಾರತೀಯ ಸೇನೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ ಗೆ ಗ್ರೀನ್ ಸಿಗ್ನಲ್ 

ನವೆದೆಹಲಿ: ಹೆಚ್ಚು ಹೆಚ್ಚು ಯುವಕರಿಗೆ ಸೇನೆ ಸೇರಲು ಅವಕಾಶ ನೀಡುವ ನಿಟ್ಟಿನಲ್ಲಿ, ಇಂದು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಅಗ್ನಿಪಥ್ ಎನ್ನುವಂತ ಹೊಸ ನೇಮಕಾತಿ, ಸಂಪುಟ ಸಮಿತಿಯು ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದು, ರಾಜನಾಥ್ ಸಿಂಗ್ ಉಪಸ್ಥಿತಿಯಲ್ಲಿ ಸೇನೆಯ ಹೊಸ ನೇಮಕಾತಿ ಮಾದರಿ ‘ಅಗ್ನಿಪಥ್’ಗೆ ಸಂಪುಟ ಸಮಿತಿ ಅನುಮೋದಿಸಿದೆ ಎಂದರು.

‘ಅಗ್ನಿಪಥ್’ ನ ಪರಿವರ್ತನಾ ಯೋಜನೆಯನ್ನು ಅನುಮೋದಿಸಲು ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯು ಇಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಇದರ ಅಡಿಯಲ್ಲಿ, ಭಾರತೀಯ ಯುವಕರಿಗೆ ಸಶಸ್ತ್ರ ಸೇವೆಗಳಿಗೆ ಸೇರ್ಪಡೆಗೊಳ್ಳಲು ಅವಕಾಶ ನೀಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಅಂದಹಾಗೇ ಹೊಸ ಸೇನಾ ನೇಮಕಾತಿ ಅಗ್ನಿಪಥ್ ಅನುಸಾರ, ಭಾರತೀಯ ಸೇನೆಯಲ್ಲಿ ಅಲ್ಪಾವಧಿಯವರೆಗೆ ಯುವಕರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ಸೇನೆ ಸೇರೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಅನ್ನು ಕೇಂದ್ರ ಸರ್ಕಾರ ನೀಡಿದೆ.

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಾಲಯಕ್ಕೆ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ – Vishwanews24

Leave a Reply