ಭಾರೀ ಮಳೆ – ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿತ : ಇಬ್ಬರು ಬಾಲಕಿಯರು ಸಾವು – Vishwanews24
ಭಾರೀ ಮಳೆ – ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿತ : ಇಬ್ಬರು ಬಾಲಕಿಯರು ಸಾವು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಕುಸಿದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಪರ್ವತಮುಖಿ ಪ್ರದೇಶದಲ್ಲಿ ಗುಡ್ಡ ಕುಸಿದು ಶ್ರುತಿ(11), ಜ್ಞಾನಶ್ರೀ(6) ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಕುಮಾರಧಾರಾ ಬಳಿಯಿರುವ ಪರ್ವತಮುಖಿ ಪ್ರದೇಶದಲ್ಲಿ ಗುಡ್ಡ ಕುಸಿದು ಕುಸುಮಧಾರ, ರೂಪಶ್ರೀ ದಂಪತಿಯ ಇಬ್ಬರು ಪುತ್ರಿಯರು ಮೃತಪಟ್ಟಿದ್ದಾರೆ.
ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳೀಯರ ಸಹಕಾರದಿಂದ ಶವಗಳನ್ನು ಹೊರತೆಗೆಯಲಾಗಿದೆ. ಸ್ಥಳಕ್ಕೆ ಪುತ್ತೂರು ಎಸಿ ಗಿರೀಶ್ ನಂದನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುರತ್ಕಲ್ : ಫಾಝಿಲ್ ಹತ್ಯೆ ಪ್ರಕರಣ – ನಾಲ್ವರು ಹಂತಕರ ಬಂಧನ – Vishwanews24
ಸುಬ್ರಹ್ಮಣ್ಯ ಪರಿಸರದಲ್ಲಿ ಸೋಮವಾರ ಸಂಜೆಯಿಂದಲೇ ಭಾರೀ ಮಳೆ ಸುರಿಯುತ್ತಿದ್ದು, ಸಂಜೆ 7 ಗಂಟೆ ಸುಮಾರಿಗೆ ಒಮ್ಮೆಲೇ ಭಾರೀ ಜೋರಾದ ಶಬ್ದ ಕೇಳಿಸಿತ್ತು. ಈ ವೇಳೆ ಮನೆಯ ಜಗಲಿಯಲ್ಲಿ ಓದುತ್ತಿದ್ದ ಶ್ರುತಿ ಪುಸ್ತಕವನ್ನು ಅಲ್ಲಿಯೇ ಬಿಟ್ಟು ಶಬ್ದ ಮನೆಯ ಒಳಗಿಂದ ಬಂದಿರಬಹುದು ಎಂದು ಅತ್ತ ಓಡಿದಳು. ಜ್ಞಾನಶ್ರೀ ಮನೆಯ ಒಳಗೆ ಚಾವಡಿಯಲ್ಲಿದ್ದು ದೊಡ್ಡವಳು ಕೂಡ ಅಲ್ಲಿಗೆ ತಲುಪಿದ್ದರು. ಇದೇ ಸಂದರ್ಭ ಗುಡ್ಡ ಮನೆಯ ಮೇಲೆಯೇ ಕುಸಿಸಿದೆ. ಅಡುಗೆಯಲ್ಲಿ ನಿರತರಾಗಿದ್ದ ತಾಯಿ ಅದೇ ಕ್ಷಣ ಶಬ್ದಕ್ಕೆ ಹೆದರಿ ಮಕ್ಕಳು ಹೊರಗಿದ್ದಾರೆ ಎಂದು ಹೊರಗಡೆ ಬಂದಿದ್ದಾರೆ.
ಇನ್ನು ಭಾರೀ ಮಳೆಯಿಂದಾಗಿ ಮರ ಬಿದ್ದು ಹಾಗೂ ನೀರು ಉಕ್ಕಿ ಹರಿದು ಸಂಪರ್ಕ ಸಾಧ್ಯವಿರುವ ಎರಡು ಕಡೆಯಿಂದಲೂ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದ್ದರಿಂದ ಘಟನ ಸ್ಥಳಕ್ಕೆ ಶೀಘ್ರ ತೆರಳಲು ಸಾಧ್ಯವಾಗಿರಲಿಲ್ಲ. ತಡರಾತ್ರಿ ಸುರಿಯುತ್ತಿದ್ದ ಮಳೆಯೂ ರಕ್ಷಣ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.
ಮಣ್ಣಿನಡಿ ಸಿಲುಕಿದ ಸೋದರಿಯರನ್ನು ದೀರ್ಘ ಕಾರ್ಯಾಚರಣೆಯ ಬಳಿಕ ಮೇಲ ಕ್ಕೆತ್ತುವ ಸಂದರ್ಭ ಇಬ್ಬರೂ ಒಬ್ಬರಿಗೊಬ್ಬರು ಕೈ ಕೈ ಹಿಡಿದುಕೊಂಡ ಸ್ಥಿತಿಯಲ್ಲಿರುವುದನ್ನು ಕಂಡು ಎಲ್ಲರ ಕಣ್ಣಂನಲ್ಲಿ ನೀರು ತುಂಬಿತ್ತು.
