ಮಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ : ಶಾಲೆಗಳಿಗೆ ರಜೆ ಘೋಷಣೆ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು ಸುಳ್ಯ ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು ಈ ಮೂರು ತಾಲೂಕಿನಲ್ಲಿ ಮುಂಜಾಗ್ರತ ಕ್ರಮವಾಗಿ ಪುತ್ತೂರು ಸಹಾಯಕ ಆಯುಕ್ತ ಕೃಷ್ಣಮೂರ್ತಿ, ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿಂದೆ ಕೂಡ ಮಳೆ ಅವಾಂತರದಿಂದ ಹಲವು ನಷ್ಟ ಉಂಟಾಗಿ, ಪ್ರಾಣ ಹಾನಿ ಕೂಡ ಕಂಡಿದ್ದು, ಜನ ಜೀವನ ಅಸ್ತವ್ಯಸ್ತವಾಗಿತ್ತು.
ಮುಂಜಾಗೃತಕಮವಾಗಿ ಜಿಲ್ಲೆಯ ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಗರದಲ್ಲೂ ಮಳೆ ಜೋರಾಗಿದ್ದು, ಶಾಲೆಗಳಿಗೆ ತೆರಳಲು ಮಕ್ಕಳು ತೊಂದರೆ ಅನುಭವಿಸುವಂತಾಯಿತು.
