ಮಂಗಳೂರಿನ ಜನತೆಯೊಂದಿಗೆ ನಾಳೆ ಮೋದಿ ಮನ್ ಕಿ ಬಾತ್
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಸಂವಾದ ನಡೆಸುವ ಅವಕಾಶವನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಲ್ಪಿಸಿದೆ.
ಸೆ.30ರಂದು ನಡೆಯುವ ಮನ್ ಕೀ ಬಾತ್ನಲ್ಲಿ ಸಂವಾದ ನಡೆಸಲು ಮಂಗಳೂರಿನ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದ ಬಳಿ ಇರುವ (ನವಭಾರತ ವೃತ್ತ) ಟಿ.ವಿ.ರಮಣ ಪೈ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಅಂದು ಬೆಳಗ್ಗೆ 10.30ರಿಂದ 12ರವರೆಗೆ ಸಂವಾದಕ್ಕೆ ಅವಕಾಶವಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ತಿಳಿಸಿದೆ.
