ಮಂಗಳೂರು :ಕರಾವಳಿಯ ಖ್ಯಾತ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ – vishwanews24
ಮಂಗಳೂರು :ಕರಾವಳಿಯ ಖ್ಯಾತ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ
ಮಂಗಳೂರು: ಕರಾವಳಿಯ ಖ್ಯಾತ ಪತ್ರಕರ್ತ ಮನೋಹರ್ ಪ್ರಸಾದ್ (64) ನಿಧನರಾಗಿದ್ದಾರೆ.
ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪೂರ್ತಿಗೊಳಿಸಿ ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು.
ಉದಯವಾಣಿ ಪತ್ರಿಕೆಯಲ್ಲಿ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದ ಮನೋಹರ್ ಪ್ರಸಾದ್, ಬಳಿಕ ಮುಖ್ಯ ವರದಿಗಾರರಾಗಿ, ಬ್ಯುರೋ ಚೀಫ್ ಜೊತೆಗೆ ಸಹಾಯಕ ಸಂಪಾಕರಾಗಿಯೂ ಕಾರ್ಯ ನಿರ್ವಹಿಸುವ ಮೂಲಕ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಮನೋಹರ ಪ್ರಸಾದ್ ತಮ್ಮ ಸಾಧನೆ ಹಾಗೂ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ಪ್ರಶಸ್ತಿ ಪಡೆದಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಸೇವೆಯಿಂದ ನಿವೃತ್ತಿಗೊಂಡಿದ್ದರು. ಬಳಿಕ ಅವರು ಅನಾರೋಗ್ಯಕ್ಕೀಡಾಗಿದ್ದರು. ಇಂದು ಮುಂಜಾನೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
