ಮಂಗಳೂರು: ಕೇರಳದಿಂದ ಜಿಲ್ಲೆಗೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಹಾಗೂ 7 ದಿನ ಕ್ವಾರಂಟೈನ್ : ಡಿಸಿ ಡಾ. ರಾಜೇಂದ್ರ ಕೆ.ವಿ. -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕೇರಳದಿಂದ ಜಿಲ್ಲೆಗೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಹಾಗೂ 7 ದಿನ ಕ್ವಾರಂಟೈನ್ : ಡಿಸಿ ಡಾ. ರಾಜೇಂದ್ರ ಕೆ.ವಿ. -Vishwanews24

ಮಂಗಳೂರು : ಗಡಿ ಮೂಲಕ ಕೇರಳದಿಂದ ಜಿಲ್ಲೆಗೆ ಬರುವವವರ ಕೋವಿಡ್ ನೆಗೆಟಿನ್ ರಿಪೋರ್ಟ್ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮತ್ತೊಮ್ಮೆ ಸೂಚಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ನಿಫಾ ಪತ್ತೆ ಹಾಗೂ ಕೊರೋನಾ ಹಿನ್ನೆಲೆಯಲ್ಲಿ ಈ ಸೂಚನೆ ನೀಡಿದ್ದಾರೆ. ಗಡಿಭಾಗದಲ್ಲಿ ಕಡ್ಡಾಯವಾಗಿ ಕೋವಿಡ್ ನೆಗಿಟಿವ್ ರಿಪೋರ್ಟ್ ತೆಗೆದುಕೊಳ್ಳ ಬೇಕು ಹಾಗೂ ಅವರನ್ನು 7 ದಿನ ಕ್ವಾರಂಟೈನ್‍ನಲ್ಲಿ ಇರಿಸಬೇಕು ಎಂದರು.